ಭಟ್ಕಳ: ಮುರುಡೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಚಂದಾವರದ ಪ್ರಕಾಶ ಡಿಯೋಗ ನರೋನಾ (33) ತಮಿಳುನಾಡಿನಿಂದ ಮರಳುತ್ತಿದ್ದು, ಮುರುಡೇಶ್ವರ ಬೈಲುರು ಕ್ರಾಸ್ ಹತ್ತಿರ ತಮ್ಮ ಇಕೊ ಕಾರನ್ನು ನಿಲ್ಲಿಸಿದ್ದರು. ಕಾರಿನಲ್ಲಿದ್ದ ಆಲನ್ ಸ್ಪ್ಯಾನಿ ಇಳಿಯುವ ವೇಳೆ, ಮುರುಡೇಶ್ವರದಿಂದ ಹೊನ್ನಾವರದ ಕಡೆಗೆ ಅತಿವೇಗದಲ್ಲಿ ಬರುತ್ತಿದ್ದ ಖಾಸಗಿ ಅಂಬುಲೆನ್ಸ್ ಕಾರಿಗೆ ಹಿಂಬದಿ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಆಲನ್ ಸ್ಪ್ಯಾನಿ ತಲೆಗೆ ಹಾಗೂ ಎಡ ಕೈ ಮಣಿಕಟ್ಟಿಗೆ ಗಾಯಗೊಂಡಿದ್ದಾರೆ. ಅಂಬುಲೆನ್ಸ್ ಹಿಂಬದಿ ಸವಾರ ಮಂಜುನಾಥ ಚಂದ್ರು ಗೌಡ (ಅಂಗಡಿಹಿತ್ತ, ಹೊನ್ನಾವರ) ತಲೆ, ಕೈಕಾಲುಗಳಿಗೆ ಗಾಯಗೊಂಡಿದ್ದಾರೆ. ಕಾರು ಮಾಲೀಕರಾದ ಪ್ರಕಾಶ ನರೋನಾ ಇವರಿಗೂ ಎರಡು ಕಾಲುಗಳಿಗೆ ಪೆಟ್ಟಾಗಿದೆ.
ಅಪಘಾತದಲ್ಲಿ ಇಕೊ ಕಾರಿಗೆ ಹಾನಿಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಸಂಬAಧ ಪ್ರಕಾಶ ನರೋನಾ ಅವರು ಅಂಬುಲೆನ್ಸ್ ಚಾಲಕ ಭರತ್ ಮಾದೇವ ಗೌಡ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ