ಭಟ್ಕಳ: ಮಠದಹಿಟ್ಟು ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಯುವ ಮೀನುಗಾರ ಅಸ್ವಸ್ಥನಾಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ಮಠದಹಿಟ್ಟು ಮೂಲದ ಯಶವಂತ ಮಂಜುನಾಥ ಮೊಗೇರ (35) ಪಾತಿ ದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಬಲೆ ಬಿಡುತ್ತಿದ್ದಾಗ ಹಠಾತ್ ಅಸ್ವಸ್ಥನಾಗಿ ದೋಣಿಯಲ್ಲೇ ಕುಸಿದು ಬಿದ್ದನು. ತಕ್ಷಣವೇ ಸಹೋದ್ಯೋಗಿಗಳು ಅವನನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ.
ಈ ಸಂಬAಧ ದೇವಿದಾಸ ಮೊಗೇರ ನೀಡಿದ ದೂರಿನ ಮೇರೆಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ