ಭಟ್ಕಳ: ಮಠದಹಿಟ್ಟು ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಯುವ ಮೀನುಗಾರ ಅಸ್ವಸ್ಥನಾಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ಮಠದಹಿಟ್ಟು ಮೂಲದ ಯಶವಂತ ಮಂಜುನಾಥ ಮೊಗೇರ (35) ಪಾತಿ ದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಬಲೆ ಬಿಡುತ್ತಿದ್ದಾಗ ಹಠಾತ್ ಅಸ್ವಸ್ಥನಾಗಿ ದೋಣಿಯಲ್ಲೇ ಕುಸಿದು ಬಿದ್ದನು. ತಕ್ಷಣವೇ ಸಹೋದ್ಯೋಗಿಗಳು ಅವನನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ.
ಈ ಸಂಬAಧ ದೇವಿದಾಸ ಮೊಗೇರ ನೀಡಿದ ದೂರಿನ ಮೇರೆಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಎಐಟಿಎಂನಲ್ಲಿ ವಿಟಿಯು ಅಂತರ ಕಾಲೇಜು ಫುಟ್ಬಾಲ್ ಪಂದ್ಯಾವಳಿ ಚಾಲನೆ
ತೇಜಸ್ವಿ ನಾಯ್ಕರಿಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ
ಬೈಲೂರಿನಲ್ಲಿ ಭಗವದ್ಗೀತೆಯ 3ನೇ ಅಧ್ಯಾಯ ಸಮರ್ಪಣೆ, ಮಾತೃವಂದನೆ ಕಾರ್ಯಕ್ರಮ ಯಶಸ್ವಿ