ಭಟ್ಕಳ: ಭಟ್ಕಳದ ಮುಗ್ದುಂ ಕಾಲೋನಿಯಲ್ಲಿ ಜಾನುವಾರುಗಳ ಮೂಳೆಗಳು ಬಿದ್ದಿವೆ ಎಂಬ ಸುಳ್ಳು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಡಿದ ಅಜ್ಞಾತರ ವಿರುದ್ಧ ಪುರಸಭೆ ಮುಖ್ಯಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೈಂದೂರು ಸೋಮೇಶ್ವರ ರಸ್ತೆಯ ನಿವಾಸಿ ವೆಂಕಟೇಶ ನಾವಡಾ ಪ್ರಭಾರ ಪುರಸಭೆ ಮುಖ್ಯಾಧಿಕಾರಿಯಾಗಿದ್ದು ದೂರು ನೀಡಿದ್ದಾರೆ.
ಸೆ.9ರಂದು ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಅಜ್ಞಾತ ಆರೋಪಿತರು ಸೋಶಿಯಲ್ ಮೀಡಿಯಾದಲ್ಲಿ ಭಟ್ಕಳದ ಮುಗ್ದುಂ ಕಾಲೋನಿಯ ತೆರೆದ ಗುಡ್ಡ ಪ್ರದೇಶದಲ್ಲಿ ಜಾನುವಾರುಗಳ ಮೂಳೆಗಳ ರಾಶಿ ಬಿದ್ದಿವೆ ಎಂಬ ಫೋಟೋ ಹಾಗೂ ವೀಡಿಯೊಗಳನ್ನು ಹಂಚಿಕೊAಡಿದ್ದಾರೆ. ಈ ಮೂಲಕ ಸುಳ್ಳು ಸುದ್ದಿ ಹರಡಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿ ಶಾಂತಿ ಭಂಗ ಉಂಟು ಮಾಡುವ ಪ್ರಯತ್ನ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿತರ ಪತ್ತೆ ಹಚ್ಚಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ತನಿಖೆ ಆರಂಭಿಸಿದ್ದಾರೆ.

More Stories
ಭಟ್ಕಳ ನಿವೃತ್ತ ಸರಕಾರಿ ನೌಕರರ ಸಂಘಕ್ಕೆ ಕೆ ಆರ್ ನಾಯ್ಕ ಅಧ್ಯಕ್ಷರಾಗಿ ಆಯ್ಕೆ
ಬರ್ಗಿ ಸಂಸ್ಕೃತೋತ್ಸವದಲ್ಲಿ ಅಭಿನಂದನೆಗೊಂಡ ನವ್ಯ – ನಾಗಶ್ರೀ
ಭಟ್ಕಳ ವಿದ್ಯಾರ್ಥಿನಿ ಸಂಜನಾ ನಾಯ್ಕ್ಗೆ ರಾಜ್ಯ ಮಟ್ಟದಲ್ಲಿ 8ನೇ ರ್ಯಾಂಕ್