ಭಟ್ಕಳ: ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಮುಟ್ಟಳ್ಳಿ ಶಾಲೆಯಲ್ಲಿ ಕಟ್ಟೆವೀರ ಯುವ ಶಕ್ತಿ ಸಂಘ ಮುಟ್ಟಳ್ಳಿ ಭಾನುವಾರ ಸ್ವಚ್ಛತಾ ಅಭಿಯಾನ ನಡೆಸಿ, ಶಾಲೆಯ ಆವರಣವನ್ನು ಹಸಿ ಹುಲ್ಲು, ಕಸ-ಕಡಿಗಳಿಂದ ಸ್ವಚ್ಛಗೊಳಿಸಿದರು.
ಪ್ರತಿಯೊಬ್ಬರ ಕರ್ತವ್ಯ: ಸ್ವಚ್ಛತೆ
ಸಂಘಟನೆಯ ಯುವಕರು ಕಾರ್ಯಕ್ರಮದಲ್ಲಿ ಸ್ವಚ್ಛತೆ ಕಾಪಾಡಿದರೆ ಆರೋಗ್ಯ ಸುಸ್ಥಿರವಾಗಿರುತ್ತದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಕರ್ತವ್ಯ ಎಂಬ ಸಂದೇಶವನ್ನೂ ಹಂಚಿಕೊ0ಡರು.
ಈ ಸಂದರ್ಭದಲ್ಲಿ ಯುವ ಶಕ್ತಿ ಸಂಘದ ಅಧ್ಯಕ್ಷ ಚಂದ್ರು ನಾಯ್ಕ, ಉಪಾಧ್ಯಕ್ಷ ದೇವೇಂದ್ರ ನಾಯ್ಕ, ಕಾರ್ಯದರ್ಶಿ ಯೋಗೇಶ್ ನಾಯ್ಕ ಮತ್ತು ಸದಸ್ಯರಾದ ಶೇಷಗಿರಿ ನಾಯ್ಕ, ಅನಂತ ನಾಯ್ಕ, ವೆಂಕಟರಮಣ ನಾಯ್ಕ, ಗೋವಿಂದ ನಾಯ್ಕ,ಮಂಜುನಾಥ ಡಿ. ನಾಯ್ಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

More Stories
ಕೋರಿಯರ್ ನೆಪದಲ್ಲಿ ಅಜ್ಜಿಯ ಚಿನ್ನದ ಸರ ಹರಿದು ಪರಾರಿ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಸ್ತಿಮಕ್ಕಿಯಲ್ಲಿರುವ ಆಚಾರ್ಯ ಭವನಕ್ಕೆ ಭೇಟಿ
ಭಟ್ಕಳದ ಎಐಟಿಎಂನಲ್ಲಿ ಒಂದು ದಿನದ ಇನ್ಕ್ಯುಬೇಷನ್ ಜಾಗೃತಿ ಕಾರ್ಯಕ್ರಮ