ಭಟ್ಕಳ : ಸಪ್ಟೆಂಬರ್ ತಿಂಗಳ 19 ತಾರೀಖಿನಂದು ಕಾರವಾರ ಪೋಲಿಸ್ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ -ಬಾಲಕರ ಕಬ್ಬಡ್ಡಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವಿಭಾಗೀಯ ಮಟ್ಟಕ್ಕೆ ಭಟ್ಕಳದ ಆನಂದ್ ಆಶ್ರಮ ಕಾನ್ವೆಂಟ್ ಪ್ರೌಢಶಾಲೆ ವಿದ್ಯಾರ್ಥಿಗಳು ಆಯ್ಕೆಯಾದರು.
ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಮಹೇಶ್ ನಾಯ್ಕ್ ಇವರಿಗೆ ಮಕ್ಕಳ ಪಾಲಕರು, ಸಂಸ್ಥೆಯ ಶಿಕ್ಷಕರು, ಪ್ರಾಂಶುಪಾಲರಾದ ಸಿಸ್ಟರ್ ವಿನುತಾ ಡಿಸೋಜಾ ಹಾಗೂ ಆಡಳಿತ ಮಂಡಳಿ ಶ್ಲಾಘಿಸಿದೆ.

More Stories
ಡಿಜಿಟಲ್ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ -ಸಾಹಿತಿ ಶ್ರೀಧರ್ ಶೇಟ್ ಕಿವಿಮಾತು
ಭಟ್ಕಳ ನ್ಯಾಯಾಂಗ ಅಧಿಕಾರಿಗಳ ವಸತಿ ಸಂಕೀರ್ಣ ನಿರ್ಮಾಣಕ್ಕೆ ಅಡಿಗಲ್ಲು
ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶನಿವಾರ ಗ್ರಾಮ ಸಭೆ ಜರುಗಿತು,