ಹೊನ್ನಾವರ; ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಹೊನ್ನಾವರ ಪಟ್ಟಣ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೌರಕಾರ್ಮಿಕರ ಆರೋಗ್ಯವೃದ್ದಿಗಾಗಿ ಪುರಾಣ ಪ್ರಸಿದ್ದ ಶ್ರೀ ಕ್ಷೇತ್ರ ಇಡಗುಂಜಿ ದೇವರಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ವೇಳೆ ಪ.ಪಂ.ಅಧ್ಯಕ್ಷ ವಿಜಯ ಕಾಮತ್, ಉಪಾಧ್ಯಕ್ಷ ಸುರೇಶ ಹೊನ್ನಾವರ, ಪ.ಪಂ.ಮುಖ್ಯಾಧಿಕಾರಿ ಯೇಸು ಬೆಂಗಳೂರು ಪೌರ ಕಾರ್ಮಿಕರು ಇದ್ದರು. ನಂತರ ಪ.ಪಂ.ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ತಹಶೀಲ್ದಾರ ಪ್ರವೀಣ ಕರಾಂಡೆ, ಸಿಬ್ಬಂದಿಗಳು, ಸದಸ್ಯರು ಇದ್ದರು.
ಭಾವನಾ ಟಿವಿಗಾಗಿ ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಗುಣವಂತೆ ಶ್ರೀ ಶಂಭು ಶಂಭುಲಿಂಗೇಶ್ವರ ದೇವಾಲಯದಲ್ಲಿ ಧಾರ್ಮಿಕ ಸಭೆ ವೈಭವ
ಶ್ರೀ ಶಂಭು ಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಶಿವಾಲಯ ಲೋಕಾರ್ಪಣೆ
ಸಿ.ಎ ಕನಸು ಹೊತ್ತ ಗ್ರಾಮೀಣ ಪ್ರತಿಭೆ ಚಿನ್ನಯಿ ಶೆಟ್ಟಿ, ಪಿಯುಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ