
ಭಟ್ಕಳ: ಮುರುಡೇಶ್ವರ ಬೀಚ್ ಸಮೀಪ ಗಾಂಜಾ ಸೇವಿಸುತ್ತಿದ್ದ ತಮಿಳುನಾಡಿನ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ ಬಂದಿದೆ.
ಆರೋಪಿತ ಜೆ. ಹರಿಶಕುಮಾರ,ತಮಿಳುನಾಡು ನಿವಾಸಿ, ಮುರುಡೇಶ್ವರ ಬೀಚ್ ಎಡಬದಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದನೆಂಬ ಮಾಹಿತಿ ಆಧಾರದಲ್ಲಿ ಪಿಎಸ್ಐ ಹಣಮಂತ ಬಿರಾದಾರ ನೇತೃತ್ವದ ತಂಡ ದಾಳಿ ನಡೆಸಿ ವಶಕ್ಕೆ ಪಡೆದರು.
ನಂತರ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ಆರೋಪಿತನು ಗಾಂಜಾ ಸೇವಿಸಿದ್ದಾನೆಂಬುದು ದೃಢಪಟ್ಟಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
More Stories
ಅತಿವೇಗದ ಬಸ್ ಡಿಕ್ಕಿ, ಸ್ಕೂಟಿ ಸವಾರ ಸ್ಥಳದಲ್ಲೇ ದುರ್ಮರಣ
ಭಟ್ಕಳದ ದರ್ಶನ ನಾಯ್ಕ ರಾಜ್ಯಕ್ಕೆ ಪ್ರಥಮ, ರಾಷ್ಟ್ರಮಟ್ಟಕ್ಕೆ ಭಟ್ಕಳದ ಕೀರ್ತಿ
ಕಡಸಲಗದ್ದೆ ಗಾಂಧಿ ಫಾಲ್ಸ್ ಬಳಿ ಮೊಬೈಲ್ ಕಳವು ಯತ್ನ ಇಬ್ಬರು ಬಂಧನ