ಭಟ್ಕಳ: ಮುರುಡೇಶ್ವರ ಬೀಚ್ ಸಮೀಪ ಗಾಂಜಾ ಸೇವಿಸುತ್ತಿದ್ದ ತಮಿಳುನಾಡಿನ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ ಬಂದಿದೆ.
ಆರೋಪಿತ ಜೆ. ಹರಿಶಕುಮಾರ,ತಮಿಳುನಾಡು ನಿವಾಸಿ, ಮುರುಡೇಶ್ವರ ಬೀಚ್ ಎಡಬದಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದನೆಂಬ ಮಾಹಿತಿ ಆಧಾರದಲ್ಲಿ ಪಿಎಸ್ಐ ಹಣಮಂತ ಬಿರಾದಾರ ನೇತೃತ್ವದ ತಂಡ ದಾಳಿ ನಡೆಸಿ ವಶಕ್ಕೆ ಪಡೆದರು.

ನಂತರ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ಆರೋಪಿತನು ಗಾಂಜಾ ಸೇವಿಸಿದ್ದಾನೆಂಬುದು ದೃಢಪಟ್ಟಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

More Stories
ಕಾರ್ಯಾಚರಣೆ ಸೂಪರ್ ಫಾಸ್ಟ್: 24 ಗಂಟೆಯಲ್ಲೇ ಸುಲಿಗೆ ಪ್ರಕರಣ ಭೇದಿಸಿದ ಮುರ್ಡೇಶ್ವರ ಪೊಲೀಸರು; ಓರ್ವನ ಬಂಧನ!
ಬೀನಾ ವೈದ್ಯ ಪಿಯು ಹಾಗೂ ಪದವಿ ಕಾಲೇಜಿನಲ್ಲಿ ಎನ್ಸಿಸಿ ರ್ಯಾಂಕಿಂಗ್ ಹಾಗೂ ಬ್ಯಾಡ್ಜ್ ಪ್ರದಾನ ಸಮಾರಂಭ
ಹೆದ್ದಾರಿಯಲ್ಲಿ ಅತಿವೇಗಕ್ಕೆ ಬ್ರೇಕ್: ಸ್ಪೀಡ್ ರಾಡಾರ್ ಕಾರ್ಯಾಚರಣೆಯಲ್ಲಿ 8 ವಾಹನಗಳ ವಿರುದ್ಧ ಪ್ರಕರಣ