ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಹಾಗೂ ಅಂಕೋಲಾ ಸಬ್ ರಿಜೆಸ್ಟರ್ ಕಛೇರಿಯ ಮೇಲೆ ಲೋಕಾಯುಕ್ತ ದಾಳಿ ತಡರಾತ್ರಿಯವರೆಗೂ ದಾಖಲೆಗಳ ಪರಿಶೀಲನೆ.
ಹೊನ್ನಾವರ , ಅಂಕೋಲಾ ಉಪನೋಂದಣಾಧಿಕಾರಿ ( ಸಬ್ ರಜಿಸ್ಟರ್) ಕಚೇರಿಗೆ ಗುರುವಾರ ಕಾರವಾರದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಡಿ.ವಾಯ್.ಎಸ್.ಪಿ.ಧನ್ಯಾ ನಾಯಕ, ಇನ್ಸ್ಪೆಕ್ಟರ್ ರವಿ ಅವರನ್ನೊಳಗೊಂಡ ತಂಡ ಸಂಜೆ 5 ಗಂಟೆ ಸುಮಾರಿಗೆ ಆಗಮಿಸಿದ್ದು ರಾತ್ರಿಯವರೆಗೂ ಪರಿಶೀಲನೆ ಮುಂದುವರಿದಿದೆ.
ಹೊನ್ನಾವರ ಸಬ್ ರಜಿಸ್ಟರ್ ಕಚೇರಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಹರಿದಾಡುತ್ತಿದ್ದವು. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದಾರೆಯೇ ಅಥವಾ ಸಾರ್ವಜನಿಕವಾಗಿ ಹರಿದಾಡುತ್ತಿರಯವ ದೂರಿನ ಹಿನ್ನಲೆಯಲ್ಲಿ ಆಗಮಿಸಿದ್ದಾರೆಯೇ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಸತ್ಯಸಾಯಿ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಅಳ್ಳಂಕಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ವಿಶೇಷ ಚೇತನರ ದಿನ ಆಚರಿಸಲಾಯಿತು.
ಸೇವೆಯಿಂದಲೇ ಸಂತೃಪ್ತಿ – ಡಾ. ಡಿ. ಎಲ್. ಹೆಬ್ಬಾರ