ಭಟ್ಕಳ: ವಿಶ್ವಪ್ರಸಿದ್ಧ ಮುರುಡೇಶ್ವರದಲ್ಲಿ ಹೈದರಾಬಾದ್ ಮೂಲದ ಪ್ರವಾಸಿಗನೊಬ್ಬ ಕಳೆದುಕೊಂಡಿದ್ದ 48,190 ನಗದು ಹೊಂದಿದ ಬ್ಯಾಗ್ನ್ನು ಸ್ಥಳೀಯ ಯುವಕನೊಬ್ಬ ಪ್ರಾಮಾಣಿಕತೆಯಿಂದ ಹಿಂತಿರುಗಿಸಿದ ಘಟನೆ ಶ್ಲಾಘನೀಯವಾಗಿದೆ.

ಪ್ರವಾಸಿಗನು ದೇವಸ್ಥಾನದ ಬಳಿ ಬ್ಯಾಗ್ ಕಳೆದುಕೊಂಡಿದ್ದು, ಗರಡಿಗಡ್ಡೆಯ ವಿಷ್ಣು ನಾಗಪ್ಪ ನಾಯ್ಕ ಅವರಿಗೆ ಅದು ಸಿಕ್ಕಿತು. ತಕ್ಷಣವೇ ಅವರು ಮುರುಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದರು. ನಂತರ ಪಿಎಸ್ ಐ ಹನುಮಂತ ಬಿರಾದರ್ ಅವರ ಸಮ್ಮುಖದಲ್ಲಿ ಬ್ಯಾಗ್ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಪ್ರವಾಸಿಗರು ವಿಷ್ಣು ನಾಯ್ಕ ಅವರಿಗೆ ಧನ್ಯವಾದ ಸಲ್ಲಿಸಿದ್ದು, ಅವರ ಈ ಪ್ರಾಮಾಣಿಕ ನಡೆಗೆ ಪೊಲೀಸರು ಹಾಗೂ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ