November 19, 2025

‘ಭಾರತೀಯ ಸಂಸ್ಕೃತಿ ಪ್ರತೀಕ ಮಹಾತ್ಮಾ ಗಾಂಧಿ’

ಹೊನ್ನಾವರ:’ಸುಭಾಶ್ಚAದ್ರ ಬೋಸ್,ಗೋಖಲೆ,ನೆಹರು ಸೇರಿದಂತೆ ಅನೇಕ ಸ್ವಾಂತ್ರö್ಯಹೋರಾಟಗಾರರ ಮನ್ನಣೆ ಹಾಗೂ ಮೆಚ್ಚುಗೆಗೆ ಪಾತ್ರರಾಗಿದ್ದ ಮೋಹನದಾಸ್ ಕರಮಚಂದ ಗಾಂಧಿ ಸರಳ ಬದುಕು,ಸತ್ಯ,ಅಹಿಂಸೆ ಮೊದಲಾದ ಮೌಲ್ಯಗಳಿಗೆ ಮಾದರಿಯಾಗಿದ್ದರ ಜೊತೆಗೆ ನುಡಿದಂತೆ ತನ್ನ ಜೀವನದಲ್ಲಿ ಅದನ್ನು ಆಚರಿಸಿ ಬದುಕಿದ್ದಾಗಲೇ ಮಹಾತ್ಮರಾದರು’ ಎಂದು ರಾಷ್ಟçಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಹಾಗೂ ವಾಗ್ಮಿ ಎಸ್.ಜೆ.ಕೈರನ್ ಅಭಿಪ್ರಾಯಪಟ್ಟರು.

ಗಾಂಧಿ ಜಯಂತಿ ಅಂಗವಾಗಿ ಇಲ್ಲಿನ ಎಸ್.ಡಿ.ಎಂ.ಪದವಿ ಕಾಲೇಜಿನ ವಿದ್ಯಾರ್ಥಿ ಒಕ್ಕೂಟ ‘ಜಾಗತಿಕ ಸಮಸ್ಯೆಗಳಿಗೆ ಗಾಂಧಿತತ್ವ ಪರಿಹಾರ’ ಎಂಬ ವಿಷಯದ ಕುರಿತು ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಅವರು ಇದೇ ವಿಷಯದ ಕುರಿತು ಉಪನ್ಯಾಸ ನೀಡಿದರು.

‘ಭಾರತೀಯ ಸಂಸ್ಕೃತಿಯ ಪ್ರತೀಕವಾಗಿ ಜಗತ್ತಿನಾದ್ಯಂತ ತಮ್ಮ ತತ್ವಾದರ್ಶಗಳ ಮೂಲಕ ಖ್ಯಾತರಾಗಿರುವ ಗಾಂಧಿ ಅವರ ಕುರಿತು ತಿಳಿಯಲು ಅವರ ಆತ್ಮಕತೆ ಹಾಗೂ ಗೋಖಲೆ ಸೇರಿದಂತೆ ಹಲವು ಮೇಧಾವಿಗಳು ಗಾಂಧಿ ಕುರಿತು ಬರೆದ ಪುಸ್ತಕಗಳನ್ನು ಓದಿ’ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ನೇಹಾ ಎಸ್.ಗೌಡ,ದ್ವಿತೀಯ ಸ್ಥಾನ ಪಡೆದ ಹೇಮಾ ಎಂ.ನಾಯ್ಕ,ತೃತೀಯ ಸ್ಥಾನ ಪಡೆದ ಜಯಲಕ್‌ಶಮಿ ಜಿ.ನಾಯ್ಕ ಹಾಗೂ ಚತುರ್ಥ ಸ್ಥಾನ ಗಳಿಸಿದ ಮಿಸ್ಬಾ ಸಯ್ಯದ್ ಅವರಿಗೆ ಬಹುಮಾನ ವಿತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಿ.ಎಲ್.ಹೆಬ್ಬಾರ ಮಾತನಾಡಿ,ಯುದ್ಧ,ಮತೀಯವಾದ ಮೊದಲಾದ ಕಾರಣಗಳಿಂದ ಜಗತ್ತು ಕಂಗೆಟ್ಟಿದ್ದು ಜಾಗತಿಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಗಾಂಧಿತತ್ವ ಹಿಂದೆAದಿಗಿAತ ಇಂದು ಹೆಚ್ಚು ಪ್ರಸ್ತುತವಾಗಿದೆ’ ಎಂದು ಹೇಳಿದರು.
ಪ್ರಧ್ಯಾಪಕರಾದ ಎಂ.ಜಿ.ಹೆಗಡೆ,ಸುರೇಶ ಎಸ್.,ವಿದ್ಯಾರ್ಥಿ ಕಾರ್ಯದರ್ಶಿಗಳಾದ ಎಚ್.ಮನೋಜ,ವಿಶಾಲ ಹೆಗಡೆ ಭಾಗವಹಿಸಿದ್ದರು.
ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡಿದರು.ಉಪನ್ಯಾಸಕಿ ಬಿಂದು ಅವಧಾನಿ ನಿರೂಪಿಸಿದರು.ಪ್ರಧಾನ ಕಾರ್ಯದರ್ಶಿ ಕಾರ್ತಿಕ ಗೌಡ ವಂದಿಸಿದರು.

About The Author

error: Content is protected !!