
ಭಟ್ಕಳ: ಪಟ್ಟಣದ ನಾಗಪ್ಪ ನಾಯ್ಕ ರೋಡ್ 1ನೇ ಕ್ರಾಸ್ನಲ್ಲಿ ನಿಲ್ಲಿಸಿದ್ದ ಸ್ಕೂಟರ್ನ್ನು ಕಳವು ಮಾಡಲು ಅಪರಿಚಿತರು ಯತ್ನಿಸಿರುವ ಘಟನೆ ಹೊರಬಿದ್ದಿದೆ. ವಕೀಲ ಮನೋಜ ಎಂ. ನಾಯ್ಕ ಅವರು ಭಟ್ಕಳ ನಗರ ಠಾಣೆಯಲ್ಲಿ ನೀಡಿದ ದೂರು ಪ್ರಕಾರ, ತಮ್ಮ ಮನೆಯ ಎದುರುಗಡೆ ನಿಲ್ಲಿಸಿದ್ದ ಬಜಾಜ್ ಚೇತಕ್ ಸ್ಕೂಟರ್ ಕಳ್ಳತನದ ಗುರಿಯಾದರೂ, ವಾಹನವನ್ನು ಕೊಂಡೊಯ್ಯಲು ಸಾಧ್ಯವಾಗದೇ, ಕಳ್ಳರು ನಂಬರ್ ಪ್ಲೇಟ್ನ್ನು ಮಾತ್ರ ಕಿತ್ತು ತೆಗೆದುಕೊಂಡು ಹೋಗಿದ್ದಾರೆ.

ಘಟನೆಯ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

More Stories
ಹಂಗಾರಖಂಡದಲ್ಲಿ ಅದ್ದೂರಿ ವನಮಹೋತ್ಸವ: ನದಿ ಅಂಚಿನಲ್ಲಿ ಹಸಿರು ಕ್ರಾಂತಿ, ಪ್ರಕೃತಿ ರಕ್ಷಣೆಗೆ ಕರೆ
ವಿಶ್ವ ಪರಿಸರ ದಿನ: ವಡೇರ ಮಠದಲ್ಲಿ ಒಂದು ಗಿಡ ಅಮ್ಮನ ಹೆಸರಲ್ಲಿ ಅಭಿಯಾನ
ವಡೇರ ಮಠದಲ್ಲಿ ಲಕ್ಷ ಕುಂಕುಮಾರ್ಚನೆ ಸಂಭ್ರಮ; 200ಕ್ಕೂ ಅಧಿಕ ಮಹಿಳೆಯರಿಂದ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ