
ಭಟ್ಕಳ: ಬಸ್ ಪ್ರಯಾಣದ ವೇಳೆ ಮಹಿಳೆಯೊಬ್ಬರ ಪರ್ಸ್ ಕಳವಾಗಿದ್ದು, ಅದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ಜೊತೆಗೆ ನಗದು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಭಟ್ಕಳ ಮೂಲದ ನಿವೃತ್ತ ಶಿಕ್ಷಕಿ ಆಸ್ಮಿನಾಭಾನು ಶೇಖ್ ಕಾಸೀಮ್ (61) ಇವರಿಗೆ ಈ ದುರ್ಘಟನೆ ಸಂಭವಿಸಿದೆ. ಭಟ್ಕಳ ಬಸ್ ನಿಲ್ದಾಣದಿಂದ ಬೆಳಗಾವಿ ಕಡೆಗೆ ಪ್ರಯಾಣಿಸುತ್ತಿದ್ದ ಅವರು, ತಲುಪಿದ ನಂತರ ತಮ್ಮ ಕೈಯಲ್ಲಿದ್ದ ಕೆಂಪು ಬಣ್ಣದ ಪರ್ಸ್ ಕಾಣೆಯಾಗಿರುವುದು ಗಮನಕ್ಕೆ ಬಂತು.
ಅದರೊಳಗೆ ಸುಮಾರು 83 ಗ್ರಾಂ ಬಂಗಾರದ ಆಭರಣಗಳು (ಅಂದಾಜು ಮೌಲ್ಯ ರೂ.11.54 ಲಕ್ಷ) ಹಾಗೂ ?3,500 ನಗದು ಇದ್ದು, ಅಜ್ಞಾತ ಕಳ್ಳನು ಕಳವು ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬAಧ ಆಸ್ಮಿನಾಭಾನು ಅವರು ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ