
ಭಟ್ಕಳ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕ್ಲಾಪುರ ಕ್ರಾಸ್ ಬಳಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ವಾಹನವನ್ನು ಭಟ್ಕಳ ಗ್ರಾಮೀಣ ಠಾಣೆ ಪಿಎಸ್ಐ ಭರಮಪ್ಪ ಬೆಳಗಲಿ ಪತ್ತೆಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಟಾಟಾ 407 ವಾಹನದಲ್ಲಿ ಸುಮಾರು ರೂ.5,000 ಮೌಲ್ಯದ 1.5 ಯುನಿಟ್ ಮರಳು ಸಾಗಿಸುತ್ತಿದ್ದ ವೇಳೆ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಚಾಲಕ ಫೈರೋಜ್ ಖಾನ್ (ತಂದೆ ರೆಹಮಾನ್ ಖಾನ್, ಗುಳ್ಮೇ ಸುನ್ನಿ ಮಸೀದಿ ಹತ್ತಿರ)ನನ್ನು ಬಂಧಿಸಿ, ಮರಳು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಯಾವುದೇ ಪಾಸ್ ಅಥವಾ ಪರವಾನಗಿ ಇಲ್ಲದೆ ಮರಳು ಸಾಗಾಟ ನಡೆಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುವುದರ ಜೊತೆಗೆ ಪರಿಸರಕ್ಕೂ ಹಾನಿ ಉಂಟಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಕುರಿತು ಭಟ್ಕಳ ಗ್ರಾಮೀಣ ಠಾಣೆಯ ಪಿಎಸ್ಐ ಭರಮಪ್ಪ ಬೆಳಗಲಿ ಸರಕಾರದ ಪರವಾಗಿ ದೂರು ನೀಡಿದ್ದಾರೆ.


More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ