ಭಟ್ಕಳ: ಪಾಸ್ ಅಥವಾ ಪರ್ಮಿಟ್ ಇಲ್ಲದೇ ಮರಳು ಸಾಗಾಟ ನಡೆಸುತ್ತಿದ್ದ ಚಾಲಕನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ಕಾಜಿಮನೆ ನಿವಾಸಿ ನಾಗರಾಜ ಮಂಜುನಾಥ ನಾಯ್ಕ, ಎಂಬಾತನು ಸರ್ಕಾರದ ಅನುಮತಿ ಪಡೆಯದೇ ಸ್ವಂತ ಲಾಭಕ್ಕಾಗಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದಾನೆಂಬ ಮಾಹಿತಿ ಮೇರೆಗೆ ಪೊಲೀಸರು ಶಿರಾಲಿ ಜಂಕ್ಷನ್ ಹತ್ತಿರ ವಾಹನ ತಡೆದು ತಪಾಸಣೆ ನಡೆಸಿದರು.

ಈ ವೇಳೆ ಸುಮಾರು ರೂ.10,000 ಮೌಲ್ಯದ 2.5 ಯುನಿಟ್ ಮರಳನ್ನು ಒಳಗೊಂಡ ಟಿಪ್ಪರ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಅಕ್ರಮ ಮರಳು ಸಾಗಾಟದ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಹಿನ್ನೆಲೆಯಲ್ಲಿ ಪಿಎಸೈ ಭರಮಪ್ಪ ಬೆಳಗಲಿ ಅವರ ದೂರು ಮೇರೆಗೆ ಆರೋಪಿತ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

More Stories
ಕುಳವಾಡಿ ಅರಣ್ಯದಲ್ಲಿ ಕೋಳಿ ಅಂಕ ಜೂಜಾಟಕ್ಕೆ ಪೊಲೀಸ್ ದಾಳಿ: ಆರು ಮಂದಿ ಬಂಧನ
ಗಾಂಜಾ ಸೇವನೆ ದೃಢ: ಯುವಕನ ವಿರುದ್ಧ ಪ್ರಕರಣ
ಹಂಗಾರಖಂಡದಲ್ಲಿ ಅದ್ದೂರಿ ವನಮಹೋತ್ಸವ: ನದಿ ಅಂಚಿನಲ್ಲಿ ಹಸಿರು ಕ್ರಾಂತಿ, ಪ್ರಕೃತಿ ರಕ್ಷಣೆಗೆ ಕರೆ