ಭಟ್ಕಳ: ನಗರದ ಹಳೆಯ ಬಸ್ ನಿಲ್ದಾಣದ ಹತ್ತಿರದ ಹಳೆಯ ಮೀನು ಮಾರುಕಟ್ಟೆ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲೇ ಓ.ಸಿ. ಮಟಕಾ ಜೂಜಾಟ ನಡೆಸುತ್ತಿದ್ದ ಇಬ್ಬರನ್ನು ಭಟ್ಕಳ ನಗರ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಸಾಗರ ರಸ್ತೆಯ ಕಂಡೆಕೊಡ್ಲು ಮೂಲದ ಶಶಿಕಾಂತ ರಾಮಚಂದ್ರ ಶೆಟ್ಟಿ ಹಾಗೂ ಉಪ್ಪುಂದ ಬೈಂದೂರಿನ ವೆಂಕಟಾದ್ರಿ ನಾರಾಯಣ ಖಾರ್ವಿ ಎಂದು ಗುರುತಿಸಲಾಗಿದೆ.


ಇವರಿಬ್ಬರೂ ಸಾರ್ವಜನಿಕರಿಂದ ಹಣ ಪಡೆದು ತಮ್ಮ ಲಾಭಕ್ಕಾಗಿ ಓ.ಸಿ. ಮಟಕಾ ಜೂಜಾಟ ನಡೆಸುತ್ತಿದ್ದ ವೇಳೆ ಪಿ.ಎಸ್.ಐ. ತಿಮ್ಮಪ್ಪ ಮೊಗೇರ್ ಹಾಗೂ ನವೀನ್ ಎಸ್. ನಾಯ್ಕ ಅವರ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ದಾಳಿ ನಡೆಸಿ ಬಂಧಿಸಿತು. ಘಟನಾಸ್ಥಳದಿಂದ ಶಶಿಕಾಂತನಿAದ ರೂ,700 ಹಾಗೂ ವೆಂಕಟಾದ್ರಿಯಿAದ ರೂ.780 ನಗದು ಹಣ ಮತ್ತು ಜೂಜಾಟದ ಸಲಕರಣೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ