ಹೊನ್ನಾವರ: ತಾಲೂಕಿನ ಅರೇಅಂಗಡಿಯ ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ಶ್ರೀಧರ ಶ್ರೀಪಾದ ಭಟ್ಟ್ ಹಾಗೂ ಮೇಧಾ ಶಂಭು ಭಟ್ ಇವರು ರೂರಲ್ ಐಟಿ ಕ್ವಿಜ್ ನ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರು ,ಶೈಕ್ಷಣಿಕ ಮಾರ್ಗದರ್ಶಕರು, ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

More Stories
ಗುಣವಂತೆ ಶ್ರೀ ಶಂಭು ಶಂಭುಲಿಂಗೇಶ್ವರ ದೇವಾಲಯದಲ್ಲಿ ಧಾರ್ಮಿಕ ಸಭೆ ವೈಭವ
ಶ್ರೀ ಶಂಭು ಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಶಿವಾಲಯ ಲೋಕಾರ್ಪಣೆ
ಸಿ.ಎ ಕನಸು ಹೊತ್ತ ಗ್ರಾಮೀಣ ಪ್ರತಿಭೆ ಚಿನ್ನಯಿ ಶೆಟ್ಟಿ, ಪಿಯುಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ