
ಭಟ್ಕಳ: ಭಟ್ಕಳದ ತೆಂಗಿನಗುAಡಿ ಬಂದರಿಯಲ್ಲಿ ಕಳೆದ ವಾರ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರಲ್ಲಿ ಮತ್ತೊಬ್ಬನ ಶವ ಗಂಗೊಳ್ಳಿ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಶವ ಪತ್ತೆಯಾದ ವ್ಯಕ್ತಿಯನ್ನು ಗಣೇಶ ಮೊಗೇರ ಎಂದು ಗುರುತಿಸಲಾಗಿದೆ. ಶವ ಕಂಡ ಬಂದರು ಪ್ರದೇಶಕ್ಕೆ ಮಲ್ಪೆ ಈಶ್ವರ್ ತಂಡ ಹಾಗೂ ಕರಾವಳಿ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿ ಶವವನ್ನು ಹೊರತೆಗೆದು ಮುಂಡಳಿ ದಡ ಮಾರ್ಗವಾಗಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.
ತಾಲೂಕು ಆಡಳಿತದ ಮಾಹಿತಿ ಪ್ರಕಾರ ಶವವನ್ನು ಭಟ್ಕಳಕ್ಕೆ ತರಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದ ನಾಪತ್ತೆಯಾದ ಮೀನುಗಾರರ ಶೋಧ ಕಾರ್ಯಾಚರಣೆ ಮುಂದುವರೆದಿದೆ.

More Stories
ಭಟ್ಕಳ ತಲಾಂದ ಶಾಲೆಯಲ್ಲಿ ಉತ್ಸಾಹಭರಿತ ಪ್ರತಿಭಾ ಕಾರಂಜಿ, ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಸಡಗರ
ಭಟ್ಕಳದಲ್ಲಿ ಶ್ರೀರಾಮ ದಿಗ್ವಿಜಯ ರಥಯಾತ್ರೆಗೆ ಅದ್ದೂರಿ ಸ್ವಾಗತ
ವ್ಯವಹಾರಿಕ ಜ್ಞಾನಕ್ಕೆ ಪಾಠ ಕಲಿಸಿದ ಮಕ್ಕಳ ಸಂತೆ