
ಭಟ್ಕಳ: ಭಟ್ಕಳದ ತೆಂಗಿನಗುAಡಿ ಬಂದರಿಯಲ್ಲಿ ಕಳೆದ ವಾರ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರಲ್ಲಿ ಮತ್ತೊಬ್ಬನ ಶವ ಗಂಗೊಳ್ಳಿ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಶವ ಪತ್ತೆಯಾದ ವ್ಯಕ್ತಿಯನ್ನು ಗಣೇಶ ಮೊಗೇರ ಎಂದು ಗುರುತಿಸಲಾಗಿದೆ. ಶವ ಕಂಡ ಬಂದರು ಪ್ರದೇಶಕ್ಕೆ ಮಲ್ಪೆ ಈಶ್ವರ್ ತಂಡ ಹಾಗೂ ಕರಾವಳಿ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿ ಶವವನ್ನು ಹೊರತೆಗೆದು ಮುಂಡಳಿ ದಡ ಮಾರ್ಗವಾಗಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.
ತಾಲೂಕು ಆಡಳಿತದ ಮಾಹಿತಿ ಪ್ರಕಾರ ಶವವನ್ನು ಭಟ್ಕಳಕ್ಕೆ ತರಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದ ನಾಪತ್ತೆಯಾದ ಮೀನುಗಾರರ ಶೋಧ ಕಾರ್ಯಾಚರಣೆ ಮುಂದುವರೆದಿದೆ.


More Stories
ಶ್ರೀ ಗುರುಸುಧೀಂದ್ರ ಕಾಲೇಜಿನಲ್ಲಿ B.Sc. ಕ್ರಿಮಿನಾಲಜಿ & ಫೋರೆನ್ಸಿಕ್ ಸೈನ್ಸ್ ಕೋರ್ಸ್ಗೆ ಚಾಲನೆ: ಎಸ್ಪಿ ದೀಪನ್ ಎಂ.ಎನ್. ಉದ್ಘಾಟನೆ
ಭಟ್ಕಳದಲ್ಲಿ ‘ಶೌರ್ಯ’ ವಿಪತ್ತು ನಿರ್ವಹಣಾ ಪಡೆಗೆ NDRF ನಿಂದ ತರಬೇತಿ ಕಾರ್ಯಕ್ರಮ
ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ತಪ್ಪಿಸಿರುವುದು ಜನರ ಧ್ವನಿಯನ್ನೇ ಕಟ್ಟಿಹಾಕಿದಂತೆ: ಮಂಕಿ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ನಾಯ್ಕ್ ಆಕ್ರೋಶ