ಭಟ್ಕಳ: ತಾಲ್ಲೂಕಿನ ವೆಂಕಟಾಪುರ ಜಾಗಟೆಬೈಲು ಬಳಿ ಗಾಂಜಾ ಸೇವನೆ ಮಾಡಿ ವಿಚಿತ್ರವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರನ್ನು ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಬಂಧಿಸಿದ್ದಾರೆ.

ಬAಧಿತರು ಶಿರಾಲಿ ಮೊಗೇರಕೇರಿಯ ಹರ್ಷತ್ ಅಣ್ಣಪ್ಪ ಮೊಗೇರ (19) ಹಾಗೂ ರೋಹಿತ್ ಶಿವರಾಮ ಮೊಗೇರ (19) ಎಂದು ಗುರುತಿಸಲಾಗಿದೆ.
ಇವರಿಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿ, ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ