ಭಟ್ಕಳ: ಮುರುಡೇಶ್ವರ ಸಮುದ್ರ ತೀರದಲ್ಲಿ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ಅಲೆಗಳ ಹೊಡೆತಕ್ಕೆ ತುತ್ತಾಗಿ ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಮೃತನನ್ನು ಶಿವಮೊಗ್ಗ ಜಿಲ್ಲೆಯ ಹೋಟೆಲ್ ಮಾರಿಕಾಂಬ ಹತ್ತಿರ ವಾಸವಾಗಿದ್ದ ಶುಭಾಸ್ ದೇವೇಂದ್ರಪ್ಪ (45) ಎಂದು ಗುರುತಿಸಲಾಗಿದೆ, ಪೊಲೀಸರು ಮಾಹಿತಿಯ ಪ್ರಕಾರ, ಮೃತನು ಗುರುವಾರ ಸಂಜೆ ಸ್ನೇಹಿತನೊಂದಿಗೆ ಶಿವಮೊಗ್ಗದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಆಗಮಿಸಿದ್ದ. ಶುಕ್ರವಾರ ಮಧ್ಯಾಹ್ನ ಸಮುದ್ರ ಸ್ನಾನಕ್ಕೆ ಇಳಿದ ವೇಳೆ ಅಚಾನಕ್ ಬಲವಾದ ಅಲೆಗಳು ಎಳೆದೊಯ್ದಿದ್ದು ನೀರಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ.
ಘಟನೆಯ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
About The Author


More Stories
ಮುರ್ಡೇಶ್ವರದಲ್ಲಿ ಭವ್ಯ ಬಿಲ್ವಾರ್ಚನೆ: 2 ಸಾವಿರಕ್ಕೂ ಅಧಿಕ ಭಕ್ತರು ಭಾಗಿ
ಭಟ್ಕಳದಲ್ಲಿ ಮನೆಯ ಶೆಡ್ನಿಂದ ಹೋಂಡಾ ಸ್ಕೂಟಿ ಕಳವು
ದೇಶಸೇವೆಯೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ: ಮುರ್ಡೇಶ್ವರ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ