ಭಟ್ಕಳ: ತಾಲ್ಲೂಕಿನ ಮೂಡಭಟ್ಕಳದಲ್ಲಿ ಮದ್ಯ ವ್ಯಸನದಿಂದ ಬಳಲುತ್ತಿದ್ದ ಯುವಕನೊಬ್ಬ ಗೂಡಂಗಡಿ ಶೆಡ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆಸಿದೆ ಮೃತ ಲೋಕೇಶ ಮಾಯಪ್ಪ ತೇವರ (34). ಇವನು ಕಳೆದ ಒಂದು ತಿಂಗಳಿನಿ0ದ ಅತಿಯಾದ ಮದ್ಯಪಾನದ ಪರಿಣಾಮವಾಗಿ ಆರೋಗ್ಯ ತೊಂದರೆ ಅನುಭವಿಸುತ್ತಿದ್ದನೆಂದು ಕುಟುಂಬದವರು ತಿಳಿಸಿದ್ದಾರೆ. ಟಾಪ್ ಆಫ್ ಲಾಡ್ಜ್ ಹಿಂಭಾಗದಲ್ಲಿರುವ ಗೂಡಂಗಡಿ ಶೆಡ್ನ ಕಬ್ಬಿನ ಪಟ್ಟಿಗೆ ನೈಲಾನ್ ದಾರವನ್ನು ಕಟ್ಟಿ, ಕುತ್ತಿಗೆಗೆ ಸುತ್ತಿಕೊಂಡು ಲೋಕೇಶ್ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ.

ಘಟನೆಯ ಕುರಿತು ಮೃತನ ತಮ್ಮ ರಾಕೇಶ್ ತೇವರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು ಮುಂದಿನ ತನಿಖೆ ಮುಂದುವರಿಸಿದ್ದಾರೆ.

More Stories
ಶ್ರೀ ಗುರುಸುಧೀಂದ್ರ ಕಾಲೇಜಿನಲ್ಲಿ B.Sc. ಕ್ರಿಮಿನಾಲಜಿ & ಫೋರೆನ್ಸಿಕ್ ಸೈನ್ಸ್ ಕೋರ್ಸ್ಗೆ ಚಾಲನೆ: ಎಸ್ಪಿ ದೀಪನ್ ಎಂ.ಎನ್. ಉದ್ಘಾಟನೆ
ಭಟ್ಕಳದಲ್ಲಿ ‘ಶೌರ್ಯ’ ವಿಪತ್ತು ನಿರ್ವಹಣಾ ಪಡೆಗೆ NDRF ನಿಂದ ತರಬೇತಿ ಕಾರ್ಯಕ್ರಮ
ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ತಪ್ಪಿಸಿರುವುದು ಜನರ ಧ್ವನಿಯನ್ನೇ ಕಟ್ಟಿಹಾಕಿದಂತೆ: ಮಂಕಿ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ನಾಯ್ಕ್ ಆಕ್ರೋಶ