ಭಟ್ಕಳ: ಕೊಂಕಣ ರೈಲು ಹಳಿಯ ಪಕ್ಕವಾಗಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಮಂಗಳೂರು ದಿಕ್ಕಿನಿಂದ ಮುಂಬೈ ಕಡೆಗೆ ಹೋಗುತ್ತಿದ್ದ ಮತ್ತ್ವಗಂಧ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾಲಿ ಗ್ರಾಮದ ಕೆಂಬ್ರೆ ಹತ್ತಿರ ನಡೆದಿದೆ.

ಮೃತ ಯುವಕನನ್ನು ಯೋಗೇಶ್ ಮಂಜು ಗೊಂಡ (24) ಎಂದು ಗುರುತಿಸಲಾಗಿದೆ. ಯೋಗೇಶ್ ಹಾಡುವಳ್ಳಿ ಗ್ರಾಮದ ಹುಡೀಲ್ ನಿವಾಸಿಯಾಗಿದ್ದಾನೆ. ಈ ಅಪಘಾತವು ನಿಜಕ್ಕೂ ಆಕಸ್ಮಿಕವಾಗಿಯೇ ಸಂಭವಿಸಿದ್ದೋ? ಅಥವಾ ವೈಯಕ್ತಿಕ ಕಾರಣಗಳಿಂದ ಯುವಕ ಆತ್ಮಹತ್ಯೆಗೆ ಮುಂದಾಗಿದ್ದಾನೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಈ ಸಂಬAಧ ಮೃತನ ತಂದೆ ಮಂಜು ಗೊಂಡ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ