ದಂಡದ ಹಣ ಕೋರ್ಟ್ಗೆ ಜಮಾ ಮಾಡದೇ ಲೋಪ – ಹೆಡ್ ಕಾನ್ಸ್ಟೆಬಲ್ಗೂ ಶಿಕ್ಷೆ
ಭಟ್ಕಳ: ಡ್ರಂಕ್ ಅಂಡ್ ಡ್ರೈವ್ ಪ್ರಕರಣದಲ್ಲಿ ಗಂಭೀರ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಂಜುನಾಥ್ ಲಿಂಗಾರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಗಳು ಸಾಬೀತಾದ ಹಿನ್ನೆಲೆ ದೀಪನ್ ಈ ಕಠಿಣ ಕ್ರಮ ಕೈಗೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಡ್ರಂಕ್ ಡ್ರೈವ್ ಪ್ರಕರಣ ದಾಖಲಿಸಿಕೊಂಡ ವೇಳೆ ಆರೋಪಿಯಿಂದ ₹15 ಸಾವಿರ ದಂಡವನ್ನು ಸ್ವೀಕರಿಸಲಾಗಿತ್ತು. ಈ ಮೊತ್ತವನ್ನು ಕೋರ್ಟ್ಗೆ ಜಮಾ ಮಾಡಬೇಕಾಗಿದ್ದರೂ, ಅದನ್ನು ಪಾವತಿಸದೆ ಉಳಿಸಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಅಕ್ರಮಕ್ಕೆ ಸಂಬಂಧಿಸಿ ಜುಲೈ ತಿಂಗಳಲ್ಲಿ ದೂರು ದಾಖಲಾಗಿದ್ದು, ದೂರಿನ ಆಧಾರದಲ್ಲಿ ಎಸ್ಪಿ ತನಿಖೆಗೆ ಸೂಚಿಸಿದ್ದರು.
ಪ್ರಾಥಮಿಕ ತನಿಖೆಯಲ್ಲಿ ಸಿಪಿಐ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಇದೇ ಪ್ರಕರಣದಲ್ಲಿ ಸಿಪಿಐಗೆ ಸಹಕರಿಸಿದ್ದ ಆರೋಪದ ಮೇಲೆ ಭಟ್ಕಳ ಗ್ರಾಮೀಣ ಠಾಣೆಯ ಹೆಡ್ ಕಾನ್ಸ್ಟೆಬಲ್ ಅಶೋಕ ನಾಯ್ಕ್ ಅವರನ್ನೂ ಅಮಾನತು ಮಾಡಲಾಗಿದೆ. ದೂರು ನೀಡಬೇಡಿ ಎಂದು ಸಾರ್ವಜನಿಕರನ್ನು ಗದರಿಸಿದ ಆರೋಪವೂ ಹೆಡ್ ಕಾನ್ಸ್ಟೆಬಲ್ ವಿರುದ್ಧ ಕೇಳಿಬಂದಿದೆ.
ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ವಿರುದ್ಧ ಈ ಹಿಂದೆಯೂ ಸ್ಥಳೀಯರಿಂದ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು. ಎಚ್ಚರಿಕೆ ನೀಡಿದರೂ ವರ್ತನೆ ಸರಿಪಡಿಸಿಕೊಳ್ಳದಿರುವುದೇ ಇದೀಗ ಅಮಾನತಿಗೆ ಕಾರಣವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಒಟ್ಟಾರೆ: ಡ್ರಂಕ್ ಡ್ರೈವ್ ಪ್ರಕರಣದಲ್ಲಿ ಸಾರ್ವಜನಿಕರಿಂದ ಪಡೆದ ದಂಡದ ಹಣವನ್ನು ಕೋರ್ಟ್ಗೆ ಪಾವತಿಸದೇ ಗಂಭೀರ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸಿಪಿಐ ಹಾಗೂ ಹೆಡ್ ಕಾನ್ಸ್ಟೆಬಲ್ ಇಬ್ಬರನ್ನೂ ಅಮಾನತು ಮಾಡಲಾಗಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.

More Stories
ವೆಂಕಟಾಪುರ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ: ಇಬ್ಬರು ಸಾವು
ಇಂಡೋ–ಟಿಬೆಟಿಯನ್ ಗಡಿಯಲ್ಲಿ ಭಟ್ಕಳದ ಯುವಕನ ಸೇವೆ
ನಿಚ್ಚಲಮಕ್ಕಿಯ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಜ.22ರಿಂದ 26ರವರೆಗೆ ಧಾರ್ಮಿಕ ಮಹೋತ್ಸವಗಳು