ಭಟ್ಕಳ:ಮುರುಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ವಿಕಲಚೇತನ ಬಾಲಕಿ ಸಂಜನಾ (ತಂದೆ: ಸ್ವಾಮೀನಾಗನ್, ವಾಸ: ಚೆನ್ನೈ) ದೇವಸ್ಥಾನ ಎದುರು ತಮ್ಮ ಪಾಲಕರಿಂದ ತಪ್ಪಿಸಿಕೊಂಡ ಘಟನೆ ಆತಂಕಕ್ಕೆ ಕಾರಣವಾಗಿತ್ತು. ಬಾಲಕಿ ಮಾತನಾಡಲು ಸಾಧ್ಯವಿಲ್ಲ, ಕಣ್ಣು ಸರಿಯಾಗಿ ಕಾಣುವುದಿಲ್ಲ ಹಾಗೂ ಕಿವಿ ಕೇಳೋದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ತಿಳಿದ ತಕ್ಷಣವೇ ಮುರುಡೇಶ್ವರ ಪೊಲೀಸ್ ಠಾಣೆ ಪೊಲೀಸರು ತಕ್ಷಣ ಶೋಧ ಕಾರ್ಯ ಆರಂಭಿಸಿದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ತೀವ್ರ ಶೋಧದ ಬಳಿಕ ಬಾಲಕಿಯನ್ನು ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಿಎಸ್ಐ ಹನುಮಂತ ಬಿರಾದಾರ ಹಾಗೂ ಎಎಸ್ಐ ರಾಮಚಂದ್ರ ಹೆಗಡೆ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಿಂದ ಬಾಲಕಿಯನ್ನು ಯಾವುದೇ ಅಪಾಯವಿಲ್ಲದೆ ರಕ್ಷಿಸಿ ಬಳಿಕ ಪಾಲಕರಿಗೆ ಹಸ್ತಾಂತರಿಸಲಾಗಿದೆ.

ಪೊಲೀಸರ ಸಮಯೋಚಿತ, ಮಾನವೀಯ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದ್ದು, ಬಾಲಕಿಯ ಪಾಲಕರು ಮುರುಡೇಶ್ವರ ಪೊಲೀಸರ ಕಾರ್ಯವನ್ನು ಮನದಾಳದಿಂದ ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ