ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಹಾಗೂ ಭಟ್ಕಳ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ನಗರ ಪೊಲೀಸ್ ಠಾಣೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.


ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನೀತಾ ಡಿ. ಹೆರೂರ್ಕರ್ ಸ್ವಾಗತಿಸಿ, ಜಿಲ್ಲಾ ಅಧ್ಯಕ್ಷೆ ಶಿವಾನಿ ಶಾಂತಾರಾಮ ಮಾತನಾಡಿ, ಜನರ ಭದ್ರತೆಗೆ ಸೇವೆ ಸಲ್ಲಿಸುವ ಪೊಲೀಸರ ತ್ಯಾಗ ಮರೆಯಲಾಗದು. ರಾಖಿ ಕಟ್ಟುವುದು ಅವರ ಸೇವೆಗೆ ಕೃತಜ್ಞತೆಯ ಸಂಕೇತ ಎಂದರು.

ನAತರ ಮಹಿಳಾ ಮೋರ್ಚಾ ಪದಾಧಿಕಾರಿಗಳು ಕುಂಕುಮ ಹಚ್ಚಿ, ಆರತಿ ಬೆಳಗಿ, ಸಿಬ್ಬಂದಿಗೆ ರಾಖಿ ಕಟ್ಟಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ಗೊಂಡ, ಜಿಲ್ಲಾ ಕಾರ್ಯದರ್ಶಿ ಶ್ರೇಯಾ ಮಹಾಲೆ, ಪ್ರಧಾನ ಕಾರ್ಯದರ್ಶಿಗಳು ಕುಪ್ಪುಗೊಂಡ ಹಾಗೂ ವಿಜಯ ನಾಯ್ಕ, ಕಾರ್ಯಕಾರಿಣಿ ಸದಸ್ಯೆ ಯಮುನಾ ದಿನೇಶ್ ನಾಯ್ಕ, ಪ್ರಮುಖ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಉಪಸ್ಥಿತರಿದ್ದರು.


More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ