ಕಾರವಾರ :– ಉತ್ತರ ಕನ್ನಡ ಜಿಲ್ಲೆಯ ಕಾರವಾರ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಅ.13 ಮತ್ತು ಅ.14 ರ ಮುಂಜಾನೆ ವರೆಗೂ ಇ.ಡಿ ದಾಳಿ ಮಾಡಿದ್ದು ಎರಡು ದಿನದ ಕಾರ್ಯಾಚರಣೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯಲ್ಲಿ ಅಪಾರ ಪ್ರಮಾಣದ ಹಣ ಹಾಗೂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

1.68ಕೋಟಿ ರೂ. ನಗದು ಜತೆ 6.75ಕೆ.ಜಿ. ಚಿನ್ನ ಇದರ ಮೌಲ್ಯ ಸುಮಾರು 6,20,45,319ರೂ ನಷ್ಟಿದೆ.
ಚಿನ್ನಾಭರಣ, ಬ್ಯಾಂಕ್ ಬ್ಯಾಲೆನ್ಸ್ ಹಾಗೂ ಇತರ ಸೊತ್ತುಗಳು ಸೇರಿ ಒಟ್ಟು 14.13 ಕೋಟಿ ರೂ. ಮೌಲ್ಯದ ಸೊತ್ತನ್ಬು ಫ್ರೀಝ್ ಮಾಡಲಾಗಿದೆ.
ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬAಧಿಸಿದAತೆ ಪ್ರಮುಖ ಆರೋಪಿಯಾಗಿದ್ದ ಸತೀಶ್ ಸೈಲ್ 2010ರಲ್ಲಿ ಮಲ್ಲಿಕಾರ್ಜುನ್ ಶಿಪ್ಪಿಂಗ್ ಕಂಪೆನಿ ಮೂಲಕ ಸೈಲ್ ನಡೆಸಿದ್ದ ಅವ್ಯವಹಾರ ಸಂಬAಧಿಸಿ ಅ.13 ರ ಮುಂಜಾನೆ ಕಾರವಾರದ ಚಿತ್ತಾಕುಲದ ಮನೆಗೆ ದಾಳಿ ಮಾಡಿ ಎರಡು ಟ್ರಂಕ್ನಲ್ಲಿ ಚಿನ್ನ, ಹಣ ಹಾಗೂ ದಾಖಲೆಗಳನ್ನು ಕೊಂಡೊಯ್ದಿದ್ದ ಇ.ಡಿ ಇದೀಗ ಇದರ ಮಾಹಿತಿಯನ್ನು ಪ್ರಕಟಿಸಿದೆ.


More Stories
ಜೆಇಇ, ಸಿಇಟಿ ಸೇರಿ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಪ್ರತಿಮ ಸಾಧನೆ: ವಿದ್ಯಾರ್ಥಿ ಅನೀಶ್ ನಾಯ್ಕಗೆ ಭವ್ಯ ಸನ್ಮಾನ
ಕಮಲಾಬಾಯಿ ಪಿಕಳೆ ಹೈಸ್ಕೂಲ್: ‘ಸಂಭ್ರಮ ಶನಿವಾರ’ ಪ್ರಯುಕ್ತ ವಿಶೇಷಚೇತನ ವ್ಯಕ್ತಿಗಳೊಂದಿಗೆ ವಿದ್ಯಾರ್ಥಿಗಳ ಸಂವಹನ
ಉತ್ತರ ಕನ್ನಡದಲ್ಲಿ 29 ಕಂದಾಯ ಸಿಬ್ಬಂದಿಗೆ ಪದೋನ್ನತಿ: ರಾಜ್ಯದಲ್ಲೇ ಮೊದಲ ಯಶಸ್ವಿ ಪ್ರಕ್ರಿಯೆ