ಶಿರಸಿ: ಇಲ್ಲಿನ ಅನೇಕ ಸಂಸ್ಥೆಯು ನಿಲೇಕಣಿ ಸರಕಾರಿ ಪಿಯು ಕಾಲೇಜಿನ ಸಹಕಾರದಲ್ಲಿ ಆ.16ರ ಬೆಳಿಗ್ಗೆ 10ಕ್ಕೆ ಕವಿತೆಯೊಡನೆ ನಾವು ಪಿಯು ಕಾಲೇಜು ಮಟ್ಟದ ಕವಿತಾ ವಾಚನ ಸ್ಪರ್ಧೆ ಹಮ್ಮಿಕೊಂಡಿದೆ. ಕಾರ್ಯಕ್ರಮವನ್ನು ಯುವ ಯಕ್ಷಗಾನ ಕಲಾವಿದೆ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನಿವೃತ್ತ ಪ್ರಾಚಾರ್ಯ ನಾಗರಾಜ ಗಾಂವಕರ ವಹಿಸಿಕೊಳ್ಳುವರು. ಅತಿಥಿಗಳಾಗಿ ವಿಮರ್ಶಕ ಸುಬ್ರಾಯ ಮತ್ತಿಹಳ್ಳಿ, ಕವಯತ್ರಿ ಗಾಯತ್ರೀ ರಾಘವೇಂದ್ರ, ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ ಶೆಟ್ಟಿ, ಪ್ರಭಾರ ಪ್ರಾಚಾರ್ಯ ವಸಂತ ನಾಯಕ ಭಾಗವಹಿಸುವರು ಎಂದು ಸಂಚಾಲಕ, ಉಪನ್ಯಾಸಕ ಉಮೇಶ ನಾಯ್ಕ ತಿಳಿಸಿದ್ದಾರೆ.
ವರದಿ : ರಾಗವೇಂದ್ರ ಬೆಟ್ಟಕೊಪ್ಪಾ ಶಿರಸಿ

More Stories
ಜಾತ್ರಾ ಸಮಯದಲ್ಲಿ ಹೋಟೆಲ್ ಗಳಲ್ಲಿ ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಸಕರಿಂದ ಸೂಚನೆ.
ಸಪ್ತಕದ 20 ವರ್ಷಗಳ ಸಾರ್ಥಕ ಪಯಣದ 950ನೇ ವಿಶೇಷ ಕಾರ್ಯಕ್ರಮ ಫೆ 28 ರಂದು ನವದೆಹಲಿಯಲ್ಲಿ
ಭಕ್ತಾದಿಗಳಿಗೆ ತಂಪು ಪಾನೀಯ ಕರ್ನಾಟಕ ರಕ್ಷಣಾ ವೇದಿಕೆಯಿಂದ