ಶಿರಸಿ: ಇಲ್ಲಿನ ಅನೇಕ ಸಂಸ್ಥೆಯು ನಿಲೇಕಣಿ ಸರಕಾರಿ ಪಿಯು ಕಾಲೇಜಿನ ಸಹಕಾರದಲ್ಲಿ ಆ.16ರ ಬೆಳಿಗ್ಗೆ 10ಕ್ಕೆ ಕವಿತೆಯೊಡನೆ ನಾವು ಪಿಯು ಕಾಲೇಜು ಮಟ್ಟದ ಕವಿತಾ ವಾಚನ ಸ್ಪರ್ಧೆ ಹಮ್ಮಿಕೊಂಡಿದೆ. ಕಾರ್ಯಕ್ರಮವನ್ನು ಯುವ ಯಕ್ಷಗಾನ ಕಲಾವಿದೆ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನಿವೃತ್ತ ಪ್ರಾಚಾರ್ಯ ನಾಗರಾಜ ಗಾಂವಕರ ವಹಿಸಿಕೊಳ್ಳುವರು. ಅತಿಥಿಗಳಾಗಿ ವಿಮರ್ಶಕ ಸುಬ್ರಾಯ ಮತ್ತಿಹಳ್ಳಿ, ಕವಯತ್ರಿ ಗಾಯತ್ರೀ ರಾಘವೇಂದ್ರ, ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ ಶೆಟ್ಟಿ, ಪ್ರಭಾರ ಪ್ರಾಚಾರ್ಯ ವಸಂತ ನಾಯಕ ಭಾಗವಹಿಸುವರು ಎಂದು ಸಂಚಾಲಕ, ಉಪನ್ಯಾಸಕ ಉಮೇಶ ನಾಯ್ಕ ತಿಳಿಸಿದ್ದಾರೆ.
ವರದಿ : ರಾಗವೇಂದ್ರ ಬೆಟ್ಟಕೊಪ್ಪಾ ಶಿರಸಿ

More Stories
ನಾರಾಯಣ ಪಿ.ಭಾಗ್ವತ ಅವರಿಗೆ ಕನ್ನಡ ಜ್ಞಾನ ನೇಸರ ಪ್ರಶಸ್ತಿ
ಹಳಿಯಾಳದಲ್ಲಿ ಸಾಕು ನಾಯಿಗೆ ಸೀಮಂತ: ಪ್ರೇಮಾ ಪ್ರಭು ದಂಪತಿಗಳ ಅಪೂರ್ವ ಸಂಪ್ರದಾಯ
ಉತ್ತರ ಕನ್ನಡ ಜಿಲ್ಲಾ ಮಟ್ಟದ ಕೆಪಿಸಿಸಿ ಹಿಂದುಳಿದ ವರ್ಗಗಳ ಜಾಗೃತಿ ಅಭಿಯಾನ ಉದ್ಘಾಟಿಸಿದ ಶಾಸಕ ಭೀಮಣ್ಣ ಟಿ ನಾಯ್ಕ