ಭಟ್ಕಳ: ತಾಲೂಕಿನ ಮಾವಿನಕುರ್ವೆ ಬಂದರಿನಲ್ಲಿ ಬೋಟ್ ಕ್ಯಾಬಿನ್ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಬಂದಿದೆ. ಮೃತರನ್ನು ಛತ್ತೀಸ್ಗಢ ಮೂಲದ ಬುಧನ ಸಾಯ್ ತಂದೆ ಜನೇಶ್ವರ ಸಾಯ್ (39) ಎಂದು ಗುರುತಿಸಲಾಗಿದೆ.ಇವರು ಮದ್ಯಪಾನದ ಚಟ ಹೊಂದಿದ್ದರು ಎಂದು ತಿಳಿದುಬಂದಿದೆ.
ಬೋಟ್ ಕ್ಯಾಬಿನ್ನಲ್ಲಿ ಮಲಗಿದ್ದ ಇವರನ್ನು ಬೆಳಿಗ್ಗೆ ಎಬ್ಬಿಸಲು ಹೋದಾಗ ಪ್ರತಿಕ್ರಿಯಿಸದೇ ಇರುವುದರಿಂದ ತಕ್ಷಣ ಭಟ್ಕಳ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರಿಶೀಲಿಸಿದ ವೈದ್ಯರು ಈತ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ.
ಈ ಕುರಿತು ಮೃತನ ಸಹೋದರ ಗೌತಮ ಪೈಂಕರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


More Stories
ಡಿಜಿಟಲ್ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ -ಸಾಹಿತಿ ಶ್ರೀಧರ್ ಶೇಟ್ ಕಿವಿಮಾತು
ಭಟ್ಕಳ ನ್ಯಾಯಾಂಗ ಅಧಿಕಾರಿಗಳ ವಸತಿ ಸಂಕೀರ್ಣ ನಿರ್ಮಾಣಕ್ಕೆ ಅಡಿಗಲ್ಲು
ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶನಿವಾರ ಗ್ರಾಮ ಸಭೆ ಜರುಗಿತು,