
ಭಟ್ಕಳ : ಮುರ್ಡೇಶ್ವರ ಲಯನ್ಸ್ ಕ್ಲಬ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂಕೂಡ ಕಾರ್ಗಿಲ್ ವಿಜಯದಿನದ ನೆನಪಿಗಾಗಿ ಭಾರತೀಯ ಸೇನೆಯಲ್ಲಿ ಪ್ರಸ್ತುತ ಹಿಮಾಚಲ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಹೆಮ್ಮೆಯ ಯೋಧರಾದ ಸುಬ್ರಹ್ಮಣ್ಯ ಗೋಯ್ದ ನಾಯ್ಕ ಹಾಗೂ ಭಾರತೀಯ ಸೇನೆಯಲ್ಲಿ 24ವರ್ಷ ಸೇವೆ ಸಲ್ಲಿಸಿ ಸುಬೇದಾರರಾಗಿ ನಿವೃತ್ತರಾಗಿರುವ ಕೇಶವನಾಯ್ಕರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಇದೇ ವೇಳೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸಿಕೊಳ್ಳುತ್ತಾ ಮೊಂಬತ್ತಿ ಹಚ್ಚುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕಿರಣ ಕಾಯ್ಕಿಣಿ ಹಾಗೂ ಕಾರ್ಯದರ್ಶಿಗಳಾದ ನಾಗೇಶ ಮಡಿವಾಳರವರು ಕಾರ್ಗಿಲ್ ವಿಜಯಕ್ಕೆ ಕಾರಣೀಕರ್ತರಾದ ಸೈನಿಕರ ತ್ಯಾಗದ ಕುರಿತು ಮಾತನಾಡಿದರು. ಸನ್ಮಾನ ಸ್ವೀಕರಿಸಿದ ಸೈನಿಕರು ಸೇನೆಯಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊAಡರು. ಈ ಮುರ್ಡೇಶ್ವರ ಲಯನ್ಸ್ ಕ್ಲಬ್ನ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.




More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ