ಭಟ್ಕಳ: ತಾಲ್ಲೂಕಿನ ಮಾರುಕೇರಿ ಗ್ರಾಮದಲ್ಲಿ ಬೆಳಗಿನ ಜಾವ ನಡೆದ ದುರಂತದಲ್ಲಿ ಮಹಿಳೆ ಓರ್ವ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಶ್ರೀಮತಿ ಸದಾಶಿವ ಹೆಬ್ಬಾರ 55 ವರ್ಷ ಎಂದು ಗುರುತಿಸಲಾಗಿದೆ.
ದೇವರ ಪೂಜೆಗೆಂದು ಹೂ ಕೀಳಲು ತೆರಳಿದಾಗ ಮನೆಯ ಸಮೀಪದ ರಾಮಯ್ಯ ನಾಗಪ್ಪ ಗೊಂಡ ಇವರ ಅಡಿಕೆ ತೋಟದ ನೆಲಬಾವಿಯಲ್ಲಿ ಆಕಸ್ಮಾತಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬAಧ ಮೃತೆಯ ಪತಿ ಸದಾಶಿವ ಹೆಬ್ಬಾರ ಅವರು ಭಟ್ಕಳ ಗ್ರಾಮೀಣ ಠಾಣೆಗೆ ದೂರು ನೀಡಿದ್ದಾರೆ.

More Stories
ಎಐಟಿಎಂನಲ್ಲಿ ವಿಟಿಯು ಅಂತರ ಕಾಲೇಜು ಫುಟ್ಬಾಲ್ ಪಂದ್ಯಾವಳಿ ಚಾಲನೆ
ತೇಜಸ್ವಿ ನಾಯ್ಕರಿಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ
ಬೈಲೂರಿನಲ್ಲಿ ಭಗವದ್ಗೀತೆಯ 3ನೇ ಅಧ್ಯಾಯ ಸಮರ್ಪಣೆ, ಮಾತೃವಂದನೆ ಕಾರ್ಯಕ್ರಮ ಯಶಸ್ವಿ