ಭಟ್ಕಳ : ತಾಲೂಕಾ ಪಂಚಾಯತ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ(ಇಂದು) ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಈಶ್ವರ ಮಂಜಪ್ಪ ನಾಯ್ಕ (61) ಮೃತಪಟ್ಟಿದ್ದಾರೆ. ಪತ್ನಿ ಭಾರತ ನಾಯ್ಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕರಿಕಲ್ ಮೂಲದ ಈಶ್ವರ ನಾಯ್ಕ ಮುರುಡೇಶ್ವರ ಬಸ್ತಿ ದೇವಿಖಾನ್ನಲ್ಲಿ ವಾಸ್ತವ್ಯ ಹೂಡಿದ್ದರು. ಪತ್ನಿಯೊಂದಿಗೆ ವೆಂಟ್ರಮಣ ದೇವಾಲಯಕ್ಕೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.
ಸರ್ಕಲ್ ಭಾಗದಿಂದ ತಾಲೂಕಾ ಪಂಚಾಯತ್ ಕಡೆಗೆ ಬರುತ್ತಿದ್ದ ವೇಳೆ, ಬೈಕ್ ಮೇಲೆ ಟ್ಯಾಂಕರ್ ಮುಂಭಾಗದ ಚಕ್ರ ಹರಿದು, ಹೆಲ್ಮೆಟ್ ಧರಿಸಿದ್ದರೂ ಈಶ್ವರ ನಾಯ್ಕರ ತಲೆಗೆ ತೀವ್ರ ಗಾಯವಾಗಿ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಪತ್ನಿಯ ಕೈ ಕಟ್ ಆಗಿ ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ನಂತರ ಪತ್ನಿಯ ಆಕ್ರಂದನ ಹೃದಯ ಕಲುಕುವಂತಿತ್ತು. ನವೆಂಬರ್ನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಕುಟುಂಬಕ್ಕೆ ಆಘಾತವಾಗಿದೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ