oplus_0
ಮುರ್ಡೇಶ್ವರ : ಲಯನ್ಸ್ ಕ್ಲಬ್ ಮುರ್ಡೇಶ್ವರವು ಭಟ್ಕಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಮಣ್ಗೆ ಅಂದಾಜು 4ಲಕ್ಷ ರೂಪಾಯಿ ಮೌಲ್ಯದ ಅತ್ಯಂತ ಸುಂದರ ಹಾಗೂ ಸುಸಜ್ಜಿತ ಶೌಚಾಲಯವನ್ನು ನಿರ್ಮಿಸಿ ಲಯನ್ 317ಬಿ ಲಯನ್ ಜಿಲ್ಲೆಯ ಹಿಂದಿನ ಗವರ್ನರ್ ಮನೋಜ್ ಮಾಣಿಕ್ರವರ ಮೂಲಕ ಅನಾವರಣ ಗೊಳಿಸಿ ವಿದ್ಯಾರ್ಥಿಗಳ ಬಳಕೆಗೆ ನೀಡಿದರು.ಶೌಚಾಲಯ ಅನಾವರಣ ಗೊಳಿಸಿ ಮಾತನಾಡಿದ ಅವರು ಲಯನ್ಸ್ ಕ್ಲಬ್ ಜಗತ್ತಿನಾದ್ಯಂತ ಸೇವಾಕಾಯದಲ್ಲಿ ತೊಡಗಿಸಿಕೊಂಡಿದ್ದು ಮುರ್ಡೇಶ್ವರ ಕ್ಲಬ್ನ ಸೇವಾ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿ, ಉಳ್ಮಣ್ ಶಾಲೆಯ ಶೌಚಾಲಯ ತೀರಾ ಹಾಳಾಗಿರುವುದನ್ನು ಮನಗಂಡು ಅತೀ ಅಗತ್ಯವಿರುವಲ್ಲಿ ಶೌಚಾಲಯ ನಿರ್ಮಿಸಿಕೊಟ್ಟಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.
ಈ ವೇಳೆ ಮಾಜಿ ಲಯನ್ ಗವರ್ನರ್ ಡಾ.ಗಿರೀಶ ಕುಚಿನಾಡ್, ಲಯನ್ ಪ್ರಾಂತೀಯ ಅಧ್ಯಕ್ಷರಾದ ರಾಜೇಶ ಸಾಲೇಹಿತ್ತಲ್, ಲಯನ್ ವಲಯ ಅಧ್ಯಕ್ಷರಾದ ಮಂಗಲಾ ನಾಯಕ, ನಿವೃತ್ತ ವಲಯ ಅರಣ್ಯಾಧಿಕಾರಿಗಳಾದ ರವೀಂದ್ರ ನಾಯಕ, ಲಯನ್ಸ್ ಕ್ಲಬ್ ಮುರ್ಡೇಶ್ವರದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಮಡಿವಾಳ, ಹಾಲಿಅಧ್ಯಕ್ಷರಾದ ಕಿರಣ ಕಾಯ್ಕಿಣಿ, ಕಾರ್ಯದರ್ಶಿಗಳಾದ ನಾಗೇಶ ಮಡಿವಾಳ, ಕೋಶಾಧ್ಯಕ್ಷರಾದ ಎಮ್.ವಿ.ಹೆಗಡೆ, ಲಯನ್ ಸದಸ್ಯರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಆಗಿರುವ ನಾಗರಾಜ ಭಟ್, ಎಸ್.ಡಿ.ಎಮ್.ಸಿ ಅಧ್ಯಕ್ಷರು,ಸದಸ್ಯರು, ಸ್ವಸ್ತಿಕ್ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷರು, ಸದಸ್ಯರು, ಶಿಕ್ಷಕರು, ಪಾಲಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

More Stories
ಭಟ್ಕಳ ತಲಾಂದ ಶಾಲೆಯಲ್ಲಿ ಉತ್ಸಾಹಭರಿತ ಪ್ರತಿಭಾ ಕಾರಂಜಿ, ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಸಡಗರ
ಭಟ್ಕಳದಲ್ಲಿ ಶ್ರೀರಾಮ ದಿಗ್ವಿಜಯ ರಥಯಾತ್ರೆಗೆ ಅದ್ದೂರಿ ಸ್ವಾಗತ
ವ್ಯವಹಾರಿಕ ಜ್ಞಾನಕ್ಕೆ ಪಾಠ ಕಲಿಸಿದ ಮಕ್ಕಳ ಸಂತೆ