ಹೊನ್ನಾವರ : ಯುವ ಮೋರ್ಚಾದ ವತಿಯಿಂದ ಹೊನ್ನಾವರ ತಾಲೂಕಿನ ಉಪ್ಪೋಣಿ ಪಂಚಾಯತ್ ವ್ಯಾಪ್ತಿಯ ಕೆಂಬಾಲ್ ಗ್ರಾಮದ ಹೊಸಾನಿಯಲ್ಲಿರುವ ಶ್ರೀ ಮಹಾಗಣಪತಿ ದೇವಾಲಯಕ್ಕೆ ಯುವ ಮೋರ್ಚಾದ ವತಿಯಿಂದ ದೇವಾಲಯದ ಆವರಣದಲ್ಲಿ ನೆಲಹಾಸು ಮತ್ತು ನಾಮಫಲಕ ಅಳವಡಿಸಲಾಯಿತು.
ಇದೇ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷ ರಘು ಖಾರ್ವಿ, ಉಪಾಧ್ಯಕ್ಷ ಸುಬ್ರಮಣ್ಯ ಹೆಗಡೆ, ಪ್ರಧಾನ ಕಾರ್ಯದರ್ಶಿ ಶಿವಾನಂದ ಮರಾಠಿ, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶ್ರೀಮತಿ ರಜನಿ ರವಿ ನಾಯ್ಕ, ಯುವ ಮೋರ್ಚಾದ ಸದಸ್ಯರಾದ ನಾಗರಾಜ್ ನಾಯ್ಕ್ ಕೆಂಬಾಲ್ ಹಾಗೂ ಪ್ರಸಾದ್ ಕೋಡಿಯ, ರವಿ ನಾಯ್ಕ ಮತ್ತು ಸ್ಥಳೀಯರು ಉಪಸ್ಥಿತರಿದ್ದರು. ಸೇವೆಗೆ ಸಹಕರಿಸಿದ ಯುವ ಮೋರ್ಚಾ ಪದಾಧಿಕಾರಿಗಳು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೋದ ನಾಯ್ಕ, ಶ್ರೀಮತಿ ರಜನಿ ರವಿ ನಾಯ್ಕ, ಬೂತ್ ಅಧ್ಯಕ್ಷರಾದ ದಿನೇಶ್ ನಾಯ್ಕ, ಪ್ರದೀಪ್ ನಾಯ್ಕ ಮಹಿಮೆ ಹಾಗೂ ಸ್ಥಳೀಯ ಭಾಜಪಾ ಕಾರ್ಯಕರ್ತರಿಗೆ ಯುವ ಮೋರ್ಚಾದ ವತಿಯಿಂದ ಧನ್ಯವಾದಗಳನ್ನ ತಿಳಿಸಿದ್ದಾರೆ ಎಂದು ಯುವ ಮೋರ್ಚಾ ಹೊನ್ನಾವರ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ