ಭಟ್ಕಳ: ತಾಲೂಕಿನ ಜಾಲಿ ಕ್ರಾಸ್ ಬಳಿ ಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲೀಕತ್ವದ ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್ ಹೋಲ್ಸೇಲ್ ಅಂಗಡಿ ಭಸ್ಮವಾದ ಘಟನೆ ಆತಂಕ ಮೂಡಿಸಿದೆ. ಅಂಗಡಿಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆAಬ ಶಂಕೆ ವ್ಯಕ್ತವಾಗಿದೆ. ಕೆಲವೇ ನಿಮಿಷಗಳಲ್ಲಿ ಅಂಗಡಿ ಕೆನ್ನಾಲಿಗೆಯ ಕಾವಲು ಸಿಕ್ಕಿ ಲಕ್ಷಾಂತರ ಮೌಲ್ಯದ ಹಣ್ಣು ತರಕಾರಿ ಹಾಗೂ ಇತರ ಸಾಮಗ್ರಿಗಳು ಸುಟ್ಟುಹೋದವು.
ಘಟನಾ ಸ್ಥಳಕ್ಕೆ ಧಾವಿಸಿದ ಭಟ್ಕಳ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ತೀವ್ರತೆಗೆ ತಲೆಬಾಗಬೇಕಾಯಿತು. ಬಳಿಕ ಹೊನ್ನಾವರ ಮತ್ತು ಬೈಂದೂರು ಅಗ್ನಿಶಾಮಕ ವಾಹನಗಳು ಸಹ ಸ್ಥಳಕ್ಕೆ ಧಾವಿಸಿ, ಸಂಯುಕ್ತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ತಕ್ಷಣ ಸ್ಥಳಕ್ಕೆ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಅವಘಡದಿಂದ ಅಂಗಡಿ ಮಾಲಿಕರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದ್ದು, ವ್ಯಾಪಾರ ವಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ