ಭಟ್ಕಳ: ತಾಲೂಕಿನ ಜಾಲಿ ಕ್ರಾಸ್ ಬಳಿ ಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲೀಕತ್ವದ ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್ ಹೋಲ್ಸೇಲ್ ಅಂಗಡಿ ಭಸ್ಮವಾದ ಘಟನೆ ಆತಂಕ ಮೂಡಿಸಿದೆ. ಅಂಗಡಿಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆAಬ ಶಂಕೆ ವ್ಯಕ್ತವಾಗಿದೆ. ಕೆಲವೇ ನಿಮಿಷಗಳಲ್ಲಿ ಅಂಗಡಿ ಕೆನ್ನಾಲಿಗೆಯ ಕಾವಲು ಸಿಕ್ಕಿ ಲಕ್ಷಾಂತರ ಮೌಲ್ಯದ ಹಣ್ಣು ತರಕಾರಿ ಹಾಗೂ ಇತರ ಸಾಮಗ್ರಿಗಳು ಸುಟ್ಟುಹೋದವು.
ಘಟನಾ ಸ್ಥಳಕ್ಕೆ ಧಾವಿಸಿದ ಭಟ್ಕಳ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ತೀವ್ರತೆಗೆ ತಲೆಬಾಗಬೇಕಾಯಿತು. ಬಳಿಕ ಹೊನ್ನಾವರ ಮತ್ತು ಬೈಂದೂರು ಅಗ್ನಿಶಾಮಕ ವಾಹನಗಳು ಸಹ ಸ್ಥಳಕ್ಕೆ ಧಾವಿಸಿ, ಸಂಯುಕ್ತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ತಕ್ಷಣ ಸ್ಥಳಕ್ಕೆ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಅವಘಡದಿಂದ ಅಂಗಡಿ ಮಾಲಿಕರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದ್ದು, ವ್ಯಾಪಾರ ವಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

More Stories
ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ತೃತೀಯ ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿ
ಭಟ್ಕಳ ನಿವೃತ್ತ ಸರಕಾರಿ ನೌಕರರ ಸಂಘಕ್ಕೆ ಕೆ ಆರ್ ನಾಯ್ಕ ಅಧ್ಯಕ್ಷರಾಗಿ ಆಯ್ಕೆ
ಬರ್ಗಿ ಸಂಸ್ಕೃತೋತ್ಸವದಲ್ಲಿ ಅಭಿನಂದನೆಗೊಂಡ ನವ್ಯ – ನಾಗಶ್ರೀ