ಭಟ್ಕಳ: ತಾಲೂಕಿನ ಜಾಲಿ ಕ್ರಾಸ್ ಬಳಿ ಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲೀಕತ್ವದ ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್ ಹೋಲ್ಸೇಲ್ ಅಂಗಡಿ ಭಸ್ಮವಾದ ಘಟನೆ ಆತಂಕ ಮೂಡಿಸಿದೆ. ಅಂಗಡಿಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆAಬ ಶಂಕೆ ವ್ಯಕ್ತವಾಗಿದೆ. ಕೆಲವೇ ನಿಮಿಷಗಳಲ್ಲಿ ಅಂಗಡಿ ಕೆನ್ನಾಲಿಗೆಯ ಕಾವಲು ಸಿಕ್ಕಿ ಲಕ್ಷಾಂತರ ಮೌಲ್ಯದ ಹಣ್ಣು ತರಕಾರಿ ಹಾಗೂ ಇತರ ಸಾಮಗ್ರಿಗಳು ಸುಟ್ಟುಹೋದವು.
ಘಟನಾ ಸ್ಥಳಕ್ಕೆ ಧಾವಿಸಿದ ಭಟ್ಕಳ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ತೀವ್ರತೆಗೆ ತಲೆಬಾಗಬೇಕಾಯಿತು. ಬಳಿಕ ಹೊನ್ನಾವರ ಮತ್ತು ಬೈಂದೂರು ಅಗ್ನಿಶಾಮಕ ವಾಹನಗಳು ಸಹ ಸ್ಥಳಕ್ಕೆ ಧಾವಿಸಿ, ಸಂಯುಕ್ತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ತಕ್ಷಣ ಸ್ಥಳಕ್ಕೆ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಅವಘಡದಿಂದ ಅಂಗಡಿ ಮಾಲಿಕರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದ್ದು, ವ್ಯಾಪಾರ ವಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

More Stories
ಕೋರಿಯರ್ ನೆಪದಲ್ಲಿ ಅಜ್ಜಿಯ ಚಿನ್ನದ ಸರ ಹರಿದು ಪರಾರಿ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಸ್ತಿಮಕ್ಕಿಯಲ್ಲಿರುವ ಆಚಾರ್ಯ ಭವನಕ್ಕೆ ಭೇಟಿ
ಭಟ್ಕಳದ ಎಐಟಿಎಂನಲ್ಲಿ ಒಂದು ದಿನದ ಇನ್ಕ್ಯುಬೇಷನ್ ಜಾಗೃತಿ ಕಾರ್ಯಕ್ರಮ