ಭಟ್ಕಳ: ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಕಳೆಕಟ್ಟಿರುವ ಸಂದರ್ಭದಲ್ಲಿ ಭಟ್ಕಳ ತಾಲ್ಲೂಕು ಆಡಳಿತ ಸೌಧದಲ್ಲಿಯೂ ಹಬ್ಬದ ಹರುಷ ಆವರಿಸಿತು. ಈ ಬಾರಿ ವಿಶೇಷವೆಂದರೆ ತಾಲ್ಲೂಕು ತಹಸೀಲ್ದಾರ್ ಕಚೇರಿಯ ಸಭಾಂಗಣವೇ ಗಣೇಶ ಹಬ್ಬದ ಕೇಂದ್ರವಾಗಿತ್ತು.

ತಹಸೀಲ್ದಾರ್ ನಾಗೇಂದ್ರ ಕೊಳಶೆಟ್ಟಿ ಅವರ ಮುಂದಾಳತ್ವದಲ್ಲಿ ಇದೇ ಮೊದಲ ಬಾರಿಗೆ ಕಚೇರಿಯ ಸಭಾಂಗಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನೆರವೇರಿತು. ಅರ್ಚಕರ ಮಂತ್ರೋಚ್ಚಾರಣೆಯೊAದಿಗೆ ಪೂಜಾ ಕಾರ್ಯಕ್ರಮ ನಡೆದಿದ್ದು, ಅಧಿಕಾರಿಗಳು ಮತ್ತು ನೌಕರರು ಒಟ್ಟಾಗಿ ಪುಷ್ಪಾರ್ಚನೆ ಸಲ್ಲಿಸಿ ಭಕ್ತಿ ವ್ಯಕ್ತಪಡಿಸಿದರು.

ಪ್ರಸಾದ ಹಾಗೂ ಸಿಹಿ ವಿತರಣೆ ಮೂಲಕ ಹಬ್ಬದ ಸಂತೋಷ ಹಂಚಿಕೊಳ್ಳಲಾಯಿತು. ದೇಶದೆಲ್ಲೆಡೆ ವಿಜೃಂಭಣೆಯಿAದ ಗೌರಿ ಗಣೇಶ ಹಬ್ಬ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಕಚೇರಿಯಲ್ಲಿ ಗಣೇಶ ಪ್ರತಿಷ್ಠಾಪನೆ ಜರುಗಿದೆ ಎಂದು ತಹಸೀಲ್ದಾರ್ ಕೊಳಶೆಟ್ಟಿ ತಿಳಿಸಿದರು.

ಸಂಜೆಯ ವೇಳೆಗೆ ಚೌಥನಿ ಹೊಳೆ ತೀರದಲ್ಲಿ ಗಣಪತಿ ವಿಸರ್ಜನಾ ಮಹೋತ್ಸವ ಜರಗಿದ್ದು, ಹಬ್ಬದ ಸಂಭ್ರಮ ಆಡಳಿತ ವಾತಾವರಣಕ್ಕೂ ಹೊಸ ಕಳೆ ತಂದಿತು.

More Stories
ಎಐಟಿಎಂನಲ್ಲಿ ವಿಟಿಯು ಅಂತರ ಕಾಲೇಜು ಫುಟ್ಬಾಲ್ ಪಂದ್ಯಾವಳಿ ಚಾಲನೆ
ತೇಜಸ್ವಿ ನಾಯ್ಕರಿಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ
ಬೈಲೂರಿನಲ್ಲಿ ಭಗವದ್ಗೀತೆಯ 3ನೇ ಅಧ್ಯಾಯ ಸಮರ್ಪಣೆ, ಮಾತೃವಂದನೆ ಕಾರ್ಯಕ್ರಮ ಯಶಸ್ವಿ