ಭಟ್ಕಳ: ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಕಳೆಕಟ್ಟಿರುವ ಸಂದರ್ಭದಲ್ಲಿ ಭಟ್ಕಳ ತಾಲ್ಲೂಕು ಆಡಳಿತ ಸೌಧದಲ್ಲಿಯೂ ಹಬ್ಬದ ಹರುಷ ಆವರಿಸಿತು. ಈ ಬಾರಿ ವಿಶೇಷವೆಂದರೆ ತಾಲ್ಲೂಕು ತಹಸೀಲ್ದಾರ್ ಕಚೇರಿಯ ಸಭಾಂಗಣವೇ ಗಣೇಶ ಹಬ್ಬದ ಕೇಂದ್ರವಾಗಿತ್ತು.

ತಹಸೀಲ್ದಾರ್ ನಾಗೇಂದ್ರ ಕೊಳಶೆಟ್ಟಿ ಅವರ ಮುಂದಾಳತ್ವದಲ್ಲಿ ಇದೇ ಮೊದಲ ಬಾರಿಗೆ ಕಚೇರಿಯ ಸಭಾಂಗಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನೆರವೇರಿತು. ಅರ್ಚಕರ ಮಂತ್ರೋಚ್ಚಾರಣೆಯೊAದಿಗೆ ಪೂಜಾ ಕಾರ್ಯಕ್ರಮ ನಡೆದಿದ್ದು, ಅಧಿಕಾರಿಗಳು ಮತ್ತು ನೌಕರರು ಒಟ್ಟಾಗಿ ಪುಷ್ಪಾರ್ಚನೆ ಸಲ್ಲಿಸಿ ಭಕ್ತಿ ವ್ಯಕ್ತಪಡಿಸಿದರು.

ಪ್ರಸಾದ ಹಾಗೂ ಸಿಹಿ ವಿತರಣೆ ಮೂಲಕ ಹಬ್ಬದ ಸಂತೋಷ ಹಂಚಿಕೊಳ್ಳಲಾಯಿತು. ದೇಶದೆಲ್ಲೆಡೆ ವಿಜೃಂಭಣೆಯಿAದ ಗೌರಿ ಗಣೇಶ ಹಬ್ಬ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಕಚೇರಿಯಲ್ಲಿ ಗಣೇಶ ಪ್ರತಿಷ್ಠಾಪನೆ ಜರುಗಿದೆ ಎಂದು ತಹಸೀಲ್ದಾರ್ ಕೊಳಶೆಟ್ಟಿ ತಿಳಿಸಿದರು.

ಸಂಜೆಯ ವೇಳೆಗೆ ಚೌಥನಿ ಹೊಳೆ ತೀರದಲ್ಲಿ ಗಣಪತಿ ವಿಸರ್ಜನಾ ಮಹೋತ್ಸವ ಜರಗಿದ್ದು, ಹಬ್ಬದ ಸಂಭ್ರಮ ಆಡಳಿತ ವಾತಾವರಣಕ್ಕೂ ಹೊಸ ಕಳೆ ತಂದಿತು.

About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ