ಭಟ್ಕಳ: ತಾಲ್ಲೂಕಿನ ಮುಂಡಳ್ಳಿ ನೀರಗದ್ದೆ ಗ್ರಾಮದಲ್ಲಿ ಮಾನವೀಯತೆಯೇ ನಾಚುವಂತ ದುರ್ಘಟನೆ! ಪತಿಯ ನಿರಂತರ ಹಿಂಸೆ ತಾಳಲಾರದೆ 32 ವರ್ಷದ ಸವಿತಾ ಸೋಮಯ್ಯ ನಾಯ್ಕ ಗುರುವಾರ ರಾತ್ರಿ ಮನೆಯಲ್ಲಿ ಉರುಳಿಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದಂದಿನಿAದಲೇ ಗಂಡ ಸೋಮಯ್ಯ ಅತಿಯಾದ ಸಂಶಯ ಪಟ್ಟು, ನಿರಂತರವಾಗಿ ಹೊಡೆದು ಬೇಸರಗೊಳಿಸುತ್ತಿದ್ದನೆಂದು ಕುಟುಂಬದವರು ಆರೋಪಿಸಿದ್ದಾರೆ. ದೈಹಿಕ ಮಾನಸಿಕ ಹಿಂಸೆಗೆ ಬೇಸತ್ತು ತಾಳ್ಮೆ ಕಳೆದುಕೊಂಡ ಸವಿತಾ ಕೊನೆಗೂ ಜೀವ ಬಲಿದಾನ ಮಾಡಬೇಕಾಯಿತು.

ನನ್ನ ತಂಗಿಯ ಸಾವಿಗೆ ಪತಿಯೇ ಕಾರಣ ಎಂದು ಸವಿತಾಳ ಅಣ್ಣ ಮೋಹನ ನಾಯ್ಕ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಕ್ಷಣವೇ ಗಂಡನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಗ್ರಾಮೀಣ ಠಾಣೆ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ