ಭಟ್ಕಳ: ತಾಲ್ಲೂಕಿನ ಮುಂಡಳ್ಳಿ ನೀರಗದ್ದೆ ಗ್ರಾಮದಲ್ಲಿ ಮಾನವೀಯತೆಯೇ ನಾಚುವಂತ ದುರ್ಘಟನೆ! ಪತಿಯ ನಿರಂತರ ಹಿಂಸೆ ತಾಳಲಾರದೆ 32 ವರ್ಷದ ಸವಿತಾ ಸೋಮಯ್ಯ ನಾಯ್ಕ ಗುರುವಾರ ರಾತ್ರಿ ಮನೆಯಲ್ಲಿ ಉರುಳಿಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದಂದಿನಿAದಲೇ ಗಂಡ ಸೋಮಯ್ಯ ಅತಿಯಾದ ಸಂಶಯ ಪಟ್ಟು, ನಿರಂತರವಾಗಿ ಹೊಡೆದು ಬೇಸರಗೊಳಿಸುತ್ತಿದ್ದನೆಂದು ಕುಟುಂಬದವರು ಆರೋಪಿಸಿದ್ದಾರೆ. ದೈಹಿಕ ಮಾನಸಿಕ ಹಿಂಸೆಗೆ ಬೇಸತ್ತು ತಾಳ್ಮೆ ಕಳೆದುಕೊಂಡ ಸವಿತಾ ಕೊನೆಗೂ ಜೀವ ಬಲಿದಾನ ಮಾಡಬೇಕಾಯಿತು.
ನನ್ನ ತಂಗಿಯ ಸಾವಿಗೆ ಪತಿಯೇ ಕಾರಣ ಎಂದು ಸವಿತಾಳ ಅಣ್ಣ ಮೋಹನ ನಾಯ್ಕ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಕ್ಷಣವೇ ಗಂಡನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಗ್ರಾಮೀಣ ಠಾಣೆ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

More Stories
ಎಐಟಿಎಂನಲ್ಲಿ ವಿಟಿಯು ಅಂತರ ಕಾಲೇಜು ಫುಟ್ಬಾಲ್ ಪಂದ್ಯಾವಳಿ ಚಾಲನೆ
ತೇಜಸ್ವಿ ನಾಯ್ಕರಿಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ
ಬೈಲೂರಿನಲ್ಲಿ ಭಗವದ್ಗೀತೆಯ 3ನೇ ಅಧ್ಯಾಯ ಸಮರ್ಪಣೆ, ಮಾತೃವಂದನೆ ಕಾರ್ಯಕ್ರಮ ಯಶಸ್ವಿ