ಭಟ್ಕಳ: ತಾಲೂಕಿನ ಗಡಿಭಾಗ ಶಿರೂರ ಪೊಲೀಸ್ ಚೆಕ್ಪೋಸ್ಟ್ ಹತ್ತಿರ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಡವಿನಕೋಣೆ ನಿವಾಸಿ ಗೋಪಾಲ ಜಿ. ಮೇಸ್ತ (25) ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.

ಶುಕ್ರವಾರ ರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಗಣೇಶ ಚೌತಿ ಕಾರ್ಯಕ್ರಮ ಮುಗಿಸಿ ಊಟಕ್ಕೆ ತೆರಳುತ್ತಿದ್ದಾಗ ಬೈಕ್ ಲಾರಿಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಗೋಪಾಲ ಮೇಸ್ತ ಸ್ಥಳದಲ್ಲೇ ಕೊನೆಯುಸಿರೆಳೆದರೆ, ಜೊತೆಗಿದ್ದ ಮನೋಜ್ ಮೇಸ್ತ ಗಂಭೀರ ಗಾಯಗೊಂಡು ಭಟ್ಕಳ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಶ್ರೀ ಗುರುಸುಧೀಂದ್ರ ಕಾಲೇಜಿನಲ್ಲಿ B.Sc. ಕ್ರಿಮಿನಾಲಜಿ & ಫೋರೆನ್ಸಿಕ್ ಸೈನ್ಸ್ ಕೋರ್ಸ್ಗೆ ಚಾಲನೆ: ಎಸ್ಪಿ ದೀಪನ್ ಎಂ.ಎನ್. ಉದ್ಘಾಟನೆ
ಭಟ್ಕಳದಲ್ಲಿ ‘ಶೌರ್ಯ’ ವಿಪತ್ತು ನಿರ್ವಹಣಾ ಪಡೆಗೆ NDRF ನಿಂದ ತರಬೇತಿ ಕಾರ್ಯಕ್ರಮ
ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ತಪ್ಪಿಸಿರುವುದು ಜನರ ಧ್ವನಿಯನ್ನೇ ಕಟ್ಟಿಹಾಕಿದಂತೆ: ಮಂಕಿ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ನಾಯ್ಕ್ ಆಕ್ರೋಶ