
ಭಟ್ಕಳ: ತಾಲೂಕಿನ ಹಳೆ ಬಸ್ ನಿಲ್ದಾಣದ ಅಂಗಡಿ ಮುಂಭಾಗದಲ್ಲಿ ಭಿಕ್ಷುಕನೋರ್ವ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದವನಾಗಿರಬಹುದೆಂದು ಶಂಕಿಸಲಾಗಿರುವ ಈ ವ್ಯಕ್ತಿ, ಕಳೆದ ಕೆಲವು ತಿಂಗಳಿAದ ಹಳೆಯ ಬಸ್ ನಿಲ್ದಾಣದ ಮೀನು ಮಾರುಕಟ್ಟೆ ಪಕ್ಕದಲ್ಲಿ ಚಿಂದಿ ಆಯುತ್ತಾ ವಾಸವಾಗಿದ್ದನು. ಅನಾರೋಗ್ಯದ ಹಿನ್ನೆಲೆಯಲ್ಲಿ ಅಂಗಡಿ ಕುಳಿತ ಸ್ಥಿತಿಯಲ್ಲೇ ಕೊನೆಯುಸಿರೆಳೆದಿದ್ದಾನೆ.

ಘಟನೆಯ ಬಳಿಕ ಸಮಾಜ ಸೇವಕ ಮಂಜು ನಾಯ್ಕ ಮುಟ್ಟಳ್ಳಿ, ಆಂಬುಲೆನ್ಸ್ ಚಾಲಕ ವಿನಾಯಕ ನಾಯ್ಕ ಹಾಗೂ ನಗರ ಪೊಲೀಸ್ ಠಾಣೆಯ ಎ.ಎಸ್.ಐ ರಾಜೇಶ್ ನಾಯ್ಕ ಅವರ ಸಹಕಾರದಿಂದ ಮೃತ ದೇಹವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತನ ಕುರಿತು ಯಾವುದೇ ಮಾಹಿತಿ ತಿಳಿದವರು ತಕ್ಷಣವೇ ಭಟ್ಕಳ ನಗರ ಪೊಲೀಸ್ ಠಾಣೆ (ದೂ.ಸಂ: 08385226333) ಅಥವಾ ಮೊಬೈಲ್ ಸಂಖ್ಯೆ 9480805269ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ