ಭಟ್ಕಳ: ಅಧ್ಯಕ್ಷರಾಗಿ ಈಶ್ವರ ಎಂ. ನಾಯ್ಕ, ಕಾರ್ಯದರ್ಶಿಯಾಗಿ ನಾಗೇಶ ಗದ್ದೆಮನೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚುನಾವಣಾಧಿಕಾರಿಯಾಗಿ ಹಿರಿಯ ವಕೀಲ ಎಂ.ಎಲ್. ನಾಯ್ಕ ಕರ್ತವ್ಯ ನಿರ್ವಹಿಸಿದರು. ಚುನಾವಣೆಯ ಸಭೆಯ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಂ.ಜೆ. ನಾಯ್ಕ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾಗಿ ಆರ್.ಜಿ.ನಾಯ್ಕ, ಜಂಟಿ ಕಾರ್ಯದರ್ಶಿಯಾಗಿ ಶ್ರಾವ್ಯ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರ ಆಯ್ಕೆಗೆ ರಾಜೇಶ ನಾಯ್ಕ ಸೂಚಿಸಿದರು. ನಾಗರಾಜ ಈ.ಎಚ್. ಅನುಮೋದಿಸಿದರು. ಉಪಾಧ್ಯಕ್ಷರ ಆಯ್ಕೆಗೆ ವಿ.ಎ. ಅಕ್ಕಿವಳ್ಳಿ ಸೂಚಿಸಿದರು. ಎಸ್.ಕೆ. ನಾಯ್ಕ ಅನುಮೋದಿಸಿದರು. ಕಾರ್ಯದರ್ಶಿ ಆಯ್ಕೆಗೆ ಎಸ್.ಬಿ. ಬೊಮ್ಮಾಯಿ ಸೂಚಿಸಿದರು. ವಿ.ಎ. ಅಕ್ಕಿವಳ್ಳಿ ಅನುಮೋದಿಸಿದರು. ಜಂಟಿ ಕಾರ್ಯದರ್ಶಿ ಆಯ್ಕೆಗೆ ಎಂ.ಎಚ್. ನಾಯ್ಕ ಸೂಚಿಸಿದರು. ವಿ.ಜೆ. ನಾಯ್ಕ ಅನುಮೋದಿಸಿದರು. ಆಯ್ಕೆ ಸಭೆಯಲ್ಲಿ ಆಯ್ಕೆ ಸಭೆಯಲ್ಲಿ ವಕೀಲರುಗಳಾದ ನಾಗರಾಜ ಈ.ಎಚ್., ಎಸ್.ಎಂ.ನಾಯ್ಕ, ವಿ.ಎಫ್.ಗೋಮ್ಸ, ಕೆ.ಎಚ್. ನಾಯ್ಕ, ಸಿ.ಎಂ. ಭಟ್ಟ, ಮಹೇಶ ನಾಯ್ಕ, ರಕ್ಷಿತ್ ಆರ್. ಶ್ರೇಷ್ಠಿ ಮುಂತಾದವರು ಸೇರಿದಂತೆ ಹಿರಿಯ, ಕಿರಿಯ ವಕೀಲರುಗಳು ಉಪಸ್ಥಿತರಿದ್ದರು.

More Stories
ಶ್ರೀ ಗುರುಸುಧೀಂದ್ರ ಕಾಲೇಜಿನಲ್ಲಿ B.Sc. ಕ್ರಿಮಿನಾಲಜಿ & ಫೋರೆನ್ಸಿಕ್ ಸೈನ್ಸ್ ಕೋರ್ಸ್ಗೆ ಚಾಲನೆ: ಎಸ್ಪಿ ದೀಪನ್ ಎಂ.ಎನ್. ಉದ್ಘಾಟನೆ
ಭಟ್ಕಳದಲ್ಲಿ ‘ಶೌರ್ಯ’ ವಿಪತ್ತು ನಿರ್ವಹಣಾ ಪಡೆಗೆ NDRF ನಿಂದ ತರಬೇತಿ ಕಾರ್ಯಕ್ರಮ
ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ತಪ್ಪಿಸಿರುವುದು ಜನರ ಧ್ವನಿಯನ್ನೇ ಕಟ್ಟಿಹಾಕಿದಂತೆ: ಮಂಕಿ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ನಾಯ್ಕ್ ಆಕ್ರೋಶ