ಭಟ್ಕಳ: ಜನರ ರಕ್ಷಣೆಯ ಜವಾಬ್ದಾರಿ ಹೊತ್ತು, ಕಾನೂನು-ಸುವ್ಯವಸ್ಥೆ ಕಾಪಾಡುವ ಹಾದಿಯಲ್ಲಿ ನಿರಂತರ ಒತ್ತಡ ಅನುಭವಿಸುತ್ತಿರುವ ಪೊಲೀಸರಿಗೆ ಮಾನಸಿಕ-ದೈಹಿಕ ಸದೃಢತೆ ಹಾಗೂ ಒತ್ತಡ ನಿರ್ವಹಣೆ ಕುರಿತ ಕಾರ್ಯಾಗಾರ ಭಟ್ಕಳದಲ್ಲಿ ಆಯೋಜನೆಯಾಯಿತು.
ಎ.ಕೆ. ಹಫೀಜ್ಕಾ ಮೆಮೋರಿಯಲ್ ಹಾಲ್ನಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಪ್ರೊ. ಪ್ರವೀಣ್ ವಿ.ಜಿ. ಅವರು ಮಾತನಾಡಿ, ಪೊಲೀಸರ ಬದುಕಿನಲ್ಲಿ ಮಾನಸಿಕ ಸಮತೋಲನದ ಅಗತ್ಯತೆಯನ್ನು ಒತ್ತಿ ಹೇಳಿದರು. ಸರಳ ವ್ಯಾಯಾಮ, ಆರೋಗ್ಯಕರ ಆಹಾರ ಪದ್ಧತಿ, ಮಧುಮೇಹ-ರಕ್ತದೊತ್ತಡ ನಿಯಂತ್ರಣ ಮಾರ್ಗಗಳನ್ನು ವಿವರಿಸಿ, ಆಕ್ಯೂಪ್ರೆಸ್ಸರ್ ಸಾಧನ ಬಳಕೆಯ ಕುರಿತು ತಿಳಿಸಿದರು.

ನಿರಂತರ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಕಾರ್ಯಪಟುವಿಗೆ ಇದು ಬಲ ತುಂಬುವ ಪ್ರಯತ್ನವಾಗಿದ್ದು, ಇಲಾಖೆಯಲ್ಲಿ ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಒತ್ತು ನೀಡಬೇಕಿದೆ ಎಂಬ ಸಂದೇಶ ಈ ಮೂಲಕ ಮತ್ತೊಮ್ಮೆ ಸ್ಪಷ್ಟವಾಯಿತು. ಕಾರ್ಯಕ್ರಮದಲ್ಲಿ ಸಿಪಿಐ ದಿವಾಕರ, ಸಿಪಿಐ ಮಂಜುನಾಥ ಲಿಂಗಾರೆಡ್ಡಿ, ಎಸ್ಐ ನವೀನ್ ನಾಯ್ಕ, ಎಸ್ಐ ರನ್ನುಗೌಡ, ಎಸ್ಐ ತಿಮ್ಮಪ್ಪ ಹಾಗೂ ಎಸ್ಐ ರಾಥೋಡ್ ಉಪಸ್ಥಿತರಿದ್ದರು.

More Stories
ಶ್ರೀ ಗುರುಸುಧೀಂದ್ರ ಕಾಲೇಜಿನಲ್ಲಿ B.Sc. ಕ್ರಿಮಿನಾಲಜಿ & ಫೋರೆನ್ಸಿಕ್ ಸೈನ್ಸ್ ಕೋರ್ಸ್ಗೆ ಚಾಲನೆ: ಎಸ್ಪಿ ದೀಪನ್ ಎಂ.ಎನ್. ಉದ್ಘಾಟನೆ
ಭಟ್ಕಳದಲ್ಲಿ ‘ಶೌರ್ಯ’ ವಿಪತ್ತು ನಿರ್ವಹಣಾ ಪಡೆಗೆ NDRF ನಿಂದ ತರಬೇತಿ ಕಾರ್ಯಕ್ರಮ
ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ತಪ್ಪಿಸಿರುವುದು ಜನರ ಧ್ವನಿಯನ್ನೇ ಕಟ್ಟಿಹಾಕಿದಂತೆ: ಮಂಕಿ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ನಾಯ್ಕ್ ಆಕ್ರೋಶ