ಭಟ್ಕಳ: ಭಟ್ಕಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರ ಹನೀಫಾಬಾದ್ ಕ್ರಾಸ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಹನೀಫಾಬಾದ್ ಕ್ರಾಸ್ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಬೈಕ್ ಸವಾರ, ಶಿರಾಲಿ ಕಡೆಯಿಂದ ಭಟ್ಕಳ ಶಹರದತ್ತ ಸಾಗುತ್ತಿದ್ದ ಟಿವಿಎಸ್ ಕನೆಕ್ಷನ್–125 ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಟಿವಿಎಸ್ ಬೈಕ್ ಚಾಲಕ ಬಿಳಿಯಾ ತಂದೆ ಶನಿಯಾರ ನಾಯ್ಕ (53), ಚರ್ಚ್ಕ್ರಾಸ್–ತೆನ್ನಮಕ್ಕಿ ನಿವಾಸಿ, ಅವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಗಾಯಾಳುವಿನ ಪುತ್ರಿ ಕುಮಾರಿ ಶ್ರಾವ್ಯ (24) ಅವರು ಠಾಣೆಗೆ ಹಾಜರಾಗಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದಲ್ಲಿ ಅಬ್ದುಲ್ ಗನಿ ತಂದೆ ಅಲಿ ಸಾಹೇಬ್ ಪಾಟ್ಟರ (ಹೆಬಳಿ–ತೆಂಗಿನಗುಂಡಿ) ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ