ಕೃಷ್ಣರಾಜಪೇಟೆ ತಾಲೂಕಿನ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಸಚಿವ ಚಲುವರಾಯಸ್ವಾಮಿ ಅವರ ಆಪ್ತ ಸಹಾಯಕರಾಗಿದ್ದ ಚೇತನಾ ಮಹೇಶ್ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಅಕಾಲಿಕವಾಗಿ ಹೃದಯಾ ಘಾತದಿಂದ ನಿಧನರಾದ ಚೇತನಾಮಹೇಶ್ ಅವರ ನಿವಾಸಕ್ಕೆ ಕ್ಷೇತ್ರದ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್ ಸಮಾಜ ಸೇವಕ ಮಲ್ಲಿಕಾರ್ಜುನ ಹಾಗೂ ಕೆಪಿಸಿಸಿ ಸದಸ್ಯರಾದ ಕಿಕ್ಕೇರಿ ಸುರೇಶ್ ಅವರೊಂದಿಗೆ ಭೇಟಿ ನೀಡಿದ ಸಚಿವ ಚಲುವರಾಯಸ್ವಾಮಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿ ನಿಮ್ಮೊಂದಿಗೆ ನಾನಿದ್ದೇನೆ, ನಿಮ್ಮ ಕಷ್ಟ ಸುಖಗಳಿಗೆ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಮಹೇಶ್ ಅವರ ವಿದ್ಯಾವಂತ ನಿರುದ್ಯೋಗಿ ಪುತ್ರ ಪುತ್ರನಿಗೆ ಉದ್ಯೋಗ ಕೊಡಿಸಿ ಕೊಡುವ ಜವಾಬ್ದಾರಿ ನನ್ನದು, ಧೈರ್ಯವಾಗಿರಿ ಎಂದು ಆತ್ಮವಿಶ್ವಾಸವನ್ನು ತುಂಬಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ.ಪ್ರಕಾಶ್, ಆರ್.ಟಿ.ಓ ಮಲ್ಲಿಕಾರ್ಜುನ್, ಕೆಪಿಸಿಸಿ ಸದಸ್ಯರಾದ ಕಿಕ್ಕೇರಿ ಸುರೇಶ್, ಮನ್ಮುಲ್ ನಿರ್ದೇಶಕ ಎಂ.ಬಿ. ಹರೀಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಶೀಳನೆರೆ ಅಂಬರೀಶ್, ಪುರಸಭಾ ಸದಸ್ಯ ಡಿ.ಪ್ರೇಂಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಕುಮಾರ್, ಡಾ.ರಾಮಕೃಷ್ಣೇಗೌಡ, ಕೆ. ಆರ್. ಪುಟ್ಟಸ್ವಾಮಿ, ಹಂಸ ರಮೇಶ್, ಮೈಲಾರಿ ರವಿ, ಮಡವಿನಕೋಡಿ ಕಾಂತರಾಜು, ಮಹಿಳಾ ನಾಯಕಿ ಆದಿಹಳ್ಳಿ ಮೀನಾಕ್ಷಿ ರಮೇಶ್, ಉಧ್ಯಮಿ ಗ್ಯಾಸ್ ರಾಜಶೇಖರ್, ರಾಮ ಪ್ರಸಾದ್, ನಂದಿಪುರ ಜಗದೀಶ್, ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

More Stories
ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಪ್ರಗತಿ ಉತ್ಸವ-2026
ಉಕ್ಕಡಗಾತ್ರಿಯ ಕರಿಬಸವ ಅಜ್ಜಯ್ಯನ ನೂತನ ದೇವಸ್ಥಾನ ಲೋಕಾರ್ಪಣೆ
ಶ್ರೀ ಪಂಚಭೂತೇಶ್ವರ ಸುಕ್ಷೇತ್ರದಲ್ಲಿ ನಡೆದ ಮಹಾಶಿವರಾತ್ರಿಯ ಅಮಾವಾಸ್ಯೆ ಜಾಗರಣೆ ಕಾರ್ಯಕ್ರಮ