ಭಟ್ಕಳ: ಮೀನುಗಾರಿಕೆಗೆ ತೆರಳುವ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಪರಿಣಾಮ ಮೀನುಗಾರನೊಬ್ಬರು ಮೃತಪಟ್ಟಿರುವ ದುರ್ಘಟನೆ ಭಟ್ಕಳ ತಾಲೂಕಿನ ಮಾವಿನಕುರ್ವಾ ಬಂದರಿನಲ್ಲಿ ನಡೆದಿದೆ.

ಕಾಯ್ಕಿಣಿ ಮೂಡಕೇರಿ ಬಸ್ತಿ ನಿವಾಸಿ ಶಂಕರ ತಂದೆ ಸಣ್ಣತಮ್ಮ ನಾಯ್ಕ (40) ಮೃತರಾಗಿದ್ದಾರೆ. ದೂರು ಪ್ರಕಾರ, ಶಂಕರ ನಾಯ್ಕ ಅವರು ರಾತ್ರಿ ಸಮಯದಲ್ಲಿ ಮೀನುಗಾರಿಕೆಗೆ ಹೊರಡುವ ಉದ್ದೇಶದಿಂದ ಬಂದರಿನಲ್ಲಿ ನಿಲ್ಲಿಸಿದ್ದ ಬೋಟಿಯಲ್ಲಿ ಬಲೆ ತಯಾರಿಯಲ್ಲಿ ತೊಡಗಿಸಿಕೊಂಡಿದ್ದರು. ಈ ಸಂದರ್ಭ ದಕ್ಕೆಯಿಂದ ಬೋಟಿಗೆ ಹತ್ತಲು ಯತ್ನಿಸಿದಾಗ, ದಕ್ಕೆ ಹಾಗೂ ಬೋಟಿಯ ಮಧ್ಯೆ ಆಳವಾದ ನೀರಿನ ಭಾಗದಲ್ಲಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ. ಮೇಲಕ್ಕೆ ಬರಲು ಸಾಧ್ಯವಾಗದೇ ಅವರು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಮೃತನ ಪತ್ನಿ ಗಿರಿಜಾ ಕೋಂ. ಶಂಕರ ನಾಯ್ಕ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಕರಾವಳಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ 112 ಇಆರ್ಎಸ್ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ